ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ಸಿಬಿಐ ತನಿಖೆ ನಡೆಸಲು ವಿಪಕ್ಷಗಳ ಆಗ್ರಹ

ಕೊಯಮತ್ತೂರು (ತಮಿಳುನಾಡು), ಜು. 7: ತಮಿಳುನಾಡು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಕೊಯಮತ್ತೂರು ವಲಯದ ಡಿಐಜಿ ಆಗಿದ್ದ ವಿಜಯಕುಮಾರ್ (45) ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಯು ವಿಹಾರ ಮುಗಿಸಿಕೊಂಡು ಮನೆಗೆ ಆಗಮಿಸಿದ ವಿಜಯಕುಮಾರ್ ಅವರು, ಗೃಹ ಕಚೇರಿ ಒಳಗೆ ಹೋಗಿದ್ದಾರೆ. ನಂತರ ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಈ ವೇಳೆ ಅವರ ಕುಟುಂಬ ಸದಸ್ಯರು ಯಾರು ಇರಲಿಲ್ಲ. ಗುರುವಾರ ಸಂಜೆಯೇ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅವರೆಲ್ಲರೂ ಹೊರ ತೆರಳಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ತಮಿಳುನಾಡು ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ಸಿಎಂ ಸ್ಟಾಲಿನ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಪ್ರಕರಣದ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ವಿಪಕ್ಷ ಎಐಎಡಿಎಂಕೆ ಆಗ್ರಹಿಸಿದೆ.

ವಿವಿಧೆಡೆ ಕಾರ್ಯನಿರ್ವಹಣೆ: ವಿಜಯಕುಮಾರ್ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ಆದರೆ ಅವರು ನಿದ್ರಾಹೀನತೆಯಿಂದ ಬಳಲುತ್ತಿದ್ದು, ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರು. ಕಾರ್ಯಭಾರದ ಒತ್ತಡವೂ ಅವರ ಮೇಲಿತ್ತು ಎಂದು ಹೇಳಲಾಗುತ್ತಿದೆ.

2009 ರ ಬ್ಯಾಚ್ ನ ತಮಿಳುನಾಡು ಕೇಡರ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಣಂ ಜಿಲ್ಲೆಗಳ ಎಸ್ಪಿಯಾಗಿ ಕಾರ್ಯನಿರ್ವಹಣೆ ಮಾಡಿದ್ದರು. ಚೆನ್ನೈನಲ್ಲಿ ಡಿಸಿಪಿಯಾಗಿ ಕೆಲಸ ಮಾಡಿದ್ದರು. ಕಳೆದ ಜನವರಿ ತಿಂಗಳಲ್ಲಿ ಅವರು ಕೊಯಮತ್ತೂರಿ ವಲಯದ ಡಿಐಜಿಯಾಗಿ ನೇಮಕಗೊಂಡಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *