ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ

ಶಿವಮೊಗ್ಗ ಡಿಸೆಂಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು/ರೈತ ಮಹಿಳೆಯರು/ ನಿರುದ್ಯೋಗ ಯುವಕ/ಯುವತಿಯರಿಗೆ ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇವು ಬೆಳಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ.
ಈ ತರಬೇತಿಯು ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗೆ ಪಸರಣೆ-ಪ್ರಾಯೋಗಿಕ ತರಬೇತಿ ಹಾಗೂ ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ.
ಆಸಕ್ತರು ತಮ್ಮ ಹೆಸರನ್ನು ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರ ಮೊ.ನಂ.: 9916918909/8310384135 ಗಳಿಗೆ ಎಸ್.ಎಂ.ಎಸ್/ವಾಟ್ಸ್‍ಪ್ ಮಾಡಿ ನೋಂದಾಯಿಸುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವನ್ನು ಸಂಪರ್ಕಿಸುವುದು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →