ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು!

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು..! *ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

*ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

ಶಿವಮೊಗ್ಗ, ಆ. 14: ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿದ ಕಳ್ಳರ ತಂಡವೊಂದು, ರಸ್ತೆಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಳವು ಮಾಡಿ ಕೊಂಡೊಯ್ದ ಘಟನೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ.

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು..! 
*ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

ಕಳ್ಳರು ಎರಡು ಜಾನುವಾರುಗಳನ್ನು ಕಾರಲ್ಲಿ ತುಂಬಿಕೊಂಡು ಹೋಗುತ್ತಿರುವ ಕೃತ್ಯವು, ಸಮೀಪದ ಮನೆಯೊಂದರಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ರಾಮಾನಾಯ್ಕ್ ಹಾಗೂ ಉಮೇಶ್ ನಾಯ್ಕ್ ಎಂಬುವರಿಗೆ ಈ ಜಾನುವಾರುಗಳು ಸೇರಿದ್ದಾಗಿವೆ. ಕಳೆದ ಕೆಲ ತಿಂಗಳುಗಳಿಂದ ಗ್ರಾಮದಲ್ಲಿ ಜಾನುವಾರುಗಳ ಕಳವು ಮಾಡಲಾಗುತ್ತಿದೆ.

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು..! 
*ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

ಇತ್ತೀಚೆಗೆ ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಎರಡು ಆಕಳುಗಳನ್ನು ಕಳವು ಮಾಡಲಾಗಿದೆ. ಇದು ಗ್ರಾಮದ ಮನೆಯೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಕಾರ್ಪಿಯೋ ಕಾರಲ್ಲಿ ಆಗಮಿಸಿ ಜಾನುವಾರುಗಳ ಕಳವು..! 
*ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ!!

ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.  ಪೊಲೀಸರು ಕೂಡ ಸಿಸಿ ಕ್ಯಾಮರಾದ ದೃಶ್ಯಾವಳಿ ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಗ್ರಾಮದಲ್ಲಿ ನಡೆಯುತ್ತಿರುವ ಜಾನುವಾರು ಕಳವು ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮಕೈಗೊಳ್ಳಬೇಕು’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೂದ್ಯನಾಯ್ಕ್ ಅವರು ಆಗ್ರಹಿಸಿದ್ದಾರೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →