ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ! ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..! ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ ಅವಕಾಶ ಕಲ್ಪಿಸಿದೆ. ಈ ಮೂಲಕ ಬಾಲಕನ ಬದುಕಿಗೆ ಹೊಸ ಚೈತನ್ಯ ತುಂಬುವ ಹೃದಯ ಸ್ಪರ್ಶಿ ಕಾರ್ಯ ನಡೆಸಿದೆ. ಹೌದು. ಮೂಲತಃ ಶಿವಮೊಗ್ಗದವರಾದ ಪ್ರಸ್ತುತ ಬಾಳೆಹೊನ್ನೂರಿನಲ್ಲಿ ನೆಲೆಸಿರುವ ತಬ್ರೇಜ್ ಖಾನ್ ಎಂಬುವರ ಪುತ್ರ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕಾರ್ಯಾಭಾರ ನಿರ್ವಹಿಸಿದ ಪುಟಾಣಿಯಾಗಿದ್ದಾನೆ. ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿ ಬಟ್ಟೆ ತೊಟ್ಟು ಆಗಮಿಸಿದ ಬಾಲಕನನ್ನು ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಠಾಣೆ ಮುಂಭಾಗ ಆತ್ಮೀಯ ಸ್ವಾಗತ ನೀಡಿದರು. ಠಾಣೆಯ ಇನ್ಸ್’ಪೆಕ್ಟರ್ ಕುರ್ಚಿಯಲ್ಲಿ ಕುಳಿತ ಆಜಾನ್ ಖಾನ್ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಕೆಲಸ ಕಾರ್ಯಗಳ ಕುರಿತಂತೆ ಸಲಹೆ ಸೂಚನೆ ನೀಡಿದ. ಪೊಲೀಸ್ ಅಧಿಕಾರಿಯಾಗುವ ತನ್ನ ಆಸೆ ಈಡೇರಿದ್ದಕ್ಕೆ ಬಾಲಕ ಸಂತಸಗೊಂಡಿದ್ದ. ನಗುನಗುತ್ತಲೆ ತನ್ನ ಸಂತಸ ಹಂಚಿಕೊಂಡ.

ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..!

ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ ಅವಕಾಶ ಕಲ್ಪಿಸಿದೆ. ಈ ಮೂಲಕ ಬಾಲಕನ ಬದುಕಿಗೆ ಹೊಸ ಚೈತನ್ಯ ತುಂಬುವ ಹೃದಯ ಸ್ಪರ್ಶಿ ಕಾರ್ಯ ನಡೆಸಿದೆ.

ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಹೌದು. ಮೂಲತಃ ಶಿವಮೊಗ್ಗದವರಾದ ಪ್ರಸ್ತುತ ಬಾಳೆಹೊನ್ನೂರಿನಲ್ಲಿ ನೆಲೆಸಿರುವ ತಬ್ರೇಜ್ ಖಾನ್ ಎಂಬುವರ ಪುತ್ರ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕಾರ್ಯಾಭಾರ ನಿರ್ವಹಿಸಿದ ಪುಟಾಣಿಯಾಗಿದ್ದಾನೆ.

ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿ ಬಟ್ಟೆ ತೊಟ್ಟು ಆಗಮಿಸಿದ ಬಾಲಕನನ್ನು ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಠಾಣೆ ಮುಂಭಾಗ ಆತ್ಮೀಯ ಸ್ವಾಗತ ನೀಡಿದರು.

ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!

ಠಾಣೆಯ ಇನ್ಸ್’ಪೆಕ್ಟರ್ ಕುರ್ಚಿಯಲ್ಲಿ ಕುಳಿತ ಆಜಾನ್ ಖಾನ್ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಕೆಲಸ ಕಾರ್ಯಗಳ ಕುರಿತಂತೆ ಸಲಹೆ ಸೂಚನೆ ನೀಡಿದ. ಪೊಲೀಸ್ ಅಧಿಕಾರಿಯಾಗುವ ತನ್ನ ಆಸೆ ಈಡೇರಿದ್ದಕ್ಕೆ ಬಾಲಕ ಸಂತಸಗೊಂಡಿದ್ದ. ನಗುನಗುತ್ತಲೆ ತನ್ನ ಸಂತಸ ಹಂಚಿಕೊಂಡ.  

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →