‘ಫೆ.11 ರೊಳಗೆ ಟ್ರಾಫಿಕ್ ಫೈನ್ ಪಾವತಿಸಿ, ಶೇ. 50 ರಷ್ಟು ರಿಯಾಯ್ತಿ ಪಡೆಯಿರಿ..!’

ಶಿವಮೊಗ್ಗ, ಫೆ. 3: ಈ ಹಿಂದೆ ಸಂಚಾರಿ ನಿಯಮಗಳ ಉಲ್ಲಂಘಿಸಿ ದಂಡ ಕಟ್ಟದೆ ಬಾಕಿ ಉಳಿಸಿಕೊಂಡಿರುವವರು, ಫೆಬ್ರವರಿ 11 ರೊಳಗೆ ದಂಡ ಪಾವತಿಸಿದರೆ ಶೇ. 50 ರಷ್ಟು ರಿಯಾಯ್ತಿ ಕಲ್ಪಿಸುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ಮನವಿ ಮೇರೆಗೆ, ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಗಳು ಶೇ. 50 ರಷ್ಟು ರಿಯಾಯ್ತಿ ನೀಡಿ ಆದೇಶ ಹೊರಡಿಸಿದ್ದಾರೆ.

ಅದರಂತೆ ಶಿವಮೊಗ್ಗ ನಗರದಲ್ಲಿಯೂ ಆದೇಶ ಜಾರಿಗೆ ಪೊಲೀಸ್ ಇಲಾಖೆ ಕ್ರಮಕೈಗೊಂಡಿದೆ. ಈ ಕುರಿತಂತೆ ಶುಕ್ರವಾರ ಪ್ರಕಟಣೆ ಹೊರಡಿಸಿದೆ.

ದಂಡ ಪಾವತಿಸಲು ಇಚ್ಚಿಸುವವರು ಫೆ. 11 ರೊಳಗೆ ಸಂಚಾರಿ ಪೊಲೀಸ್ ಠಾಣೆಗಳಿಗೆ ತೆರಳಿ ಅಥವಾ ಸಂಚಾರಿ ಠಾಣೆಗಳ ಕರ್ತವ್ಯನಿರತ ಸಿಪಿಐ, ಪಿಎಸ್ಐ, ಎಎಸ್ಐ ಗಳ ಬಳಿ ದಂಡ ಪಾವತಿಸಿ ಸ್ಥಳದಲ್ಲಿಯೇ ರಶೀದಿ ಪಡೆಯಬಹುದಾಗಿದೆ.

ಅಂತರ್ಜಾಲ ತಾಣ ಕರ್ನಾಟಕ್ ಒನ್ ವೆಬ್ ಸೈಟ್ ನಲ್ಲಿ ವಾಹನದ ನೊಂದಣಿ ಸಂಖ್ಯೆ / ನೋಟೀಸ್ ನಂಬರ್ ನಮೂದಿಸಿ ವಿವರ ಪಡೆದು ಬಾಕಿ ದಂಡ ಪಾವತಿಸಬಹುದಾಗಿದೆ. ಜೊತೆಗೆ ಶಿವಮೊಗ್ಗ ಒನ್ ಕೇಂದ್ರಗಳಲ್ಲಿಯೂ ದಂಡ ಮೊತ್ತ ಪಾವತಿಸಲು ಅವಕಾಶವಿದೆ.

ಹಾಗೆಯೇ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಮೊದಲನೆ ಮಹಡಿಯಲ್ಲಿರುವ ಟ್ರಾಫಿಕ್ ಆಟೋಮೇಷನ್ ಸೆಂಟರ್ ನಲ್ಲಿಯೂ ವಾಹನದ ನೊಂದಣಿ ಸಂಖ್ಯೆ ವಿವರ ನೀಡಿ ದಂಡ ಕಟ್ಟಲು ಅವಕಾಶ ಕಲ್ಪಿಸಲಾಗಿದೆ.

ಫೆ. 11 ರೊಳಗೆ ದಂಡ ಮೊತ್ತ ಪಾವತಿಸುವವರಿಗೆ ಮಾತ್ರ ರಿಯಾಯ್ತಿ ಅನ್ವಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →