ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರು/ಶಿವಮೊಗ್ಗ, ಆ. 31: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಮಂಗಳವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರಕಿದೆ.

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬೆಳಿಗ್ಗೆ 9.50 ಕ್ಕೆ ಪ್ರಯಾಣ ಆರಂಭಿಸಿತು. ಇಂಡೀಗೋ ಏರ್ ಲೈನ್ಸ್ ಸಂಸ್ಥೆಯ ಸಿಬ್ಬಂದಿಗಳು ಗಣ್ಯರಿಗೆ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಶಿವಮೊಗ್ಗಕ್ಕೆ ಹೊರಟ ವಿಮಾನದಲ್ಲಿ ಮೂಲಸೌಕರ್ಯ ಇಲಾಖೆ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಮೊದಲಾದವರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →