ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾವತಿ, ಸೆ. 19: ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸಲಾಗುತ್ತಿರುವ ನೀರನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯು ಭದ್ರಾವತಿಯ ಮಿಲ್ಟ್ರಿ ಕ್ಯಾಂಪ್ ಬಳಿಯ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

6-9-2023 ರಂದು ನಡೆದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ, ನೀರು ಹರಿಸಲು ಆಫ್ ಅಂಡ್ ಆನ್ ಪದ್ದತಿ ಅನುಸರಿಸಲು ತೀರ್ಮಾನಿಸಲಾಗಿತ್ತು. ಅದರಂತೆ 16-9-2023 ರಂದು ಡ್ಯಾಂನಿಂದ ಬಿಡಲಾಗುತ್ತಿದ್ದ ನೀರು ಸ್ಥಗಿತಗೊಳಿಸಬೇಕಾಗಿತ್ತು.

ಆದರೆ ಇಲ್ಲಿಯವರೆಗೂ ನೀರು ನಿಲ್ಲಿಸಿಲ್ಲ. ನೀರು ನಿಲ್ಲಿಸದ್ದಿದ್ದಾರೆ ಮುಂಬರುವ ಬೇಸಿಗೆ ವೇಳೆ, ನೀರಿನ ಕೊರತೆಯಿಂದ ಅಡಕೆ ತೋಟಗಳನ್ನು ಕಡಿದು ಹಾಕುವ ದುಃಸ್ಥಿತಿ ತಲೆದೋರುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ತಕ್ಷಣವೇ ಡ್ಯಾಂನಿಂದ ಹೊರ ಬಿಡುತ್ತಿರುವ ನೀರನ್ನು ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಂದು ಬೃಹತ್ ಪ್ರಮಾಣದ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷರಾದ ಎಸ್.ಶಿವಮೂರ್ತಿ, ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಭದ್ರಾವತಿ ತಾಲೂಕು ಘಟಕದ ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ,

ಪ್ರಧಾನ ಕಾರ್ಯದರ್ಶಿ ಸಿ.ಬಿ ಹನುಮಂತಪ್ಪ, ಕೆ.ಎಚ್ ಪ್ರಕಾಶ್, ಎಂ.ಎಚ್ ಬಸವನಗೌಡ, ಕಾರ್ಯದರ್ಶಿ ಹೆಚ್.ಜೆ ಮಂಜುನಾಥ್, ಶಿವಮೊಗ್ಗ ತಾಲೂಕು ಘಟಕದ ಅಧ್ಯಕ್ಷರಾದ ಸಿ.ಚಂದ್ರಪ್ಪ ಸೇರಿದಂತೆ ಮೊದಲಾದವರಿದ್ದರು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →