ಸಿಎಂ ಎದುರೇ ಘೋಷಣೆ ಕೂಗಿ ಆಕ್ರೋಶ..!

ಶಿವಮೊಗ್ಗ, ಫೆ.8: ಶಿವಮೊಗ್ಗ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕರ ಅಹವಾಲು ಆಲಿಸಿದರು.

ಮುಖಂಡ ತೀ.ನಾ.ಶ್ರೀನಿವಾಸ್ ನೇತೃತ್ವದ ಮಲೆನಾಡು ರೈತ ಹೋರಾಟ ಸಮಿತಿಯು, ಜಿಲ್ಲೆಯ ಬಗರ್ ಹುಕುಂ ರೈತರ ಸಮಸ್ಯೆ ಪರಿಹಾರದ ಕುರಿತಂತೆ ಸಿಎಂಗೆ ಮನವಿ ಪತ್ರ ಅರ್ಪಿಸಿತು.

ಈ ವೇಳೆ ಅರಣ್ಯ ಇಲಾಖೆಯು ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಸಿಎಂ ಎದುರೇ ಅರಣ್ಯ ಇಲಾಖೆ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಗೆ ಯತ್ನ: ಕಳೆದ ಎರಡು ವರ್ಷಗಳ ಹಿಂದೆ ಶಿವಮೊಗ್ಗ ತಾಲೂಕು ಹುಣಸೋಡು ಬಳಿ ಸಂಭವಿಸಿದ ಸ್ಪೋಟದ ವೇಳೆ, ಮನೆಗಳ ಗೋಡೆ ಬಿರುಕು ಬಿಟ್ಟವರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ, ನವ ಕರ್ನಾಟಕ ನಿರ್ಮಾಣ ವೇದಿಕೆ ಮುಖಂಡರು ಸಿಎಂಗೆ ಮನವಿ ಅರ್ಪಿಸಲು ಆಗಮಿಸಿದ್ದರು.

ಸಿಎಂ ಮನವಿ ಸ್ವೀಕರಿಸದಿದ್ದರಿಂದ ಆಕ್ರೋಶಗೊಂಡ ಮುಖಂಡರು ಘೋಷಣೆ ಕೂಗಿ ಪ್ರತಿಭಟನೆಗೆ ಯತ್ನಿಸಿದ ಘಟನೆ ನಡೆಯಿತು. ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →