ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು!

ಆಮ್ ಆದ್ಮಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತ : ಪಕ್ಷದ ಚಟುವಟಿಕೆಯಿಂದ ದೂರ ಉಳಿಯಲು ನಿರ್ಧರಿಸಿದ ಮುಖಂಡರು!

ಶಿವಮೊಗ್ಗ, ಸೆ. 25: ಆಮ್ ಆದ್ಮಿ ಪಕ್ಷ (ಎಎಪಿ) ದಲ್ಲಿ ಭಿನ್ನಮತ ಭುಗಿಲೆದಿದ್ದಿದೆ. ‘ನಾಯಕರ ವರ್ತನೆಯಿಂದ ಬೇಸತ್ತು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುತ್ತಿರುವುದಾಗಿ’ ಆ ಪಕ್ಷದ ಸ್ಥಳೀಯ ನಾಯಕರು ಸೋಮವಾರ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಪಕ್ಷದ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಮಕ್ಬುಲ್ ಅಹಮದ್ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಎಎಪಿ ಪಕ್ಷದ ತತ್ವ-ಸಿದ್ಧಾಂತ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಾಯಕತ್ವ ಮೆಚ್ಚಿ ಎಎಪಿ ಪಕ್ಷ ಸೇರ್ಪಡೆಯಾಗಿದ್ದೆವು. ಪಕ್ಷದ ಸಂಘಟನೆಗಾಗಿ ಹಗಲಿರುಳು ಪ್ರಾಮಾಣಿಕವಾಗಿ ಶ್ರಮಿಸಿದ್ದೆವೆ. ಜನಪರ ಹೋರಾಟಗಳನ್ನು ಮಾಡಿದ್ದೆವೆ.

ಆದರೆ ವಿಧಾನಸಭೆ ಚುನಾವಣೆಯ ನಂತರ ಪಕ್ಷದ ಕೆಲ ನಾಯಕರು, ಪಕ್ಷದ ಸಂಘಟನೆಯಿಂದ ದೂರ ಉಳಿದಿದ್ದಾರೆ. ಪಕ್ಷಕ್ಕೆ ದುಡಿದವರಿಗೆ ಯಾವುದೇ ಸ್ಥಾನಮಾನ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಈ ಕುರಿತಂತೆ ಪಕ್ಷದ ರಾಜ್ಯ ಮುಖಂಡರ ಗಮನಕ್ಕೆ ತರಲಾಗಿತ್ತು. ಆದರೆ ಅವರು ಈ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಕ್ಷದ ನಾಯಕರ ವರ್ತನೆಯಿಂದ ಬೇಸತ್ತು, ಪಕ್ಷದ ಚಟುವಟಿಕೆಗಳಿಂದ ದೂರ ಉಳಿಯುವ ನಿರ್ಧಾರ ಕೈಗೊಂಡಿದ್ದೆವೆ. ಸದ್ಯಕ್ಕೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಕ್ಬುಲ್ ಅಹಮದ್ ಅವರು ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಮುಖಂಡರಾದ ದಾದಾ ಖಲಂದರ್, ಸಯ್ಯದ್ ಜಬೀರ್, ಮಹಮ್ಮದ್ ಅಲಿ, ಫಕ್ರುದ್ದಿನ್, ಸೈಪುಲ್ಲಾ, ಸಮೀನಾ, ಹಸೀನಾ, ಅಬ್ದುಲ್ ಮಜೀದ್, ಫಜಲು, ರಫೀಕ್, ಮಾಲೀಕ್ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *