‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಎಚ್ಚರಿಕೆ

'ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ' : ಶಿವಮೊಗ್ಗ ಎಸ್ಪಿ ಎಚ್ಚರಿಕೆ

ಶಿವಮೊಗ್ಗ, ಅ. 3: ‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಈ ಕುರಿತಂತೆ ಅವರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ರಾಗಿಗುಡ್ಡ (ಶಾಂತಿನಗರ) ಬಡಾವಣೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಕುರಿತಂತೆ ಎಸ್ಪಿ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಪರಾಮರ್ಶಿಸಿ ವರದಿ ಮಾಡಿ: ರಾಗಿಗುಡ್ಡ ಬಡಾವಣೆಯಲ್ಲಿ ಘಟನೆ ನಡೆದ ವೇಳೆ, ಪರ ಊರಿನ ಎರಡು ಓಮ್ನಿ ಕಾರುಗಳಿದ್ದ ಬಗ್ಗೆ ಮಾಧ್ಯಮಗಳ ವರದಿ ಕುರಿತಂತೆ ಎಸ್ಪಿ ಅವರು ಸ್ಪಷ್ಟನೆ ನೀಡಿದ್ದಾರೆ.

‘ಸದರಿ ಕಾರುಗಳು ನ್ಯಾಮತಿ ಕಡೆಯದ್ದಾಗಿದೆ. ಕಾರುಗಳಲ್ಲಿ ಎರಡು ಕೋಮಿನ ಕಡೆಯವರು ಇದ್ದರು. ಮೆರವಣಿಗೆ ನೋಡುವ ಉದ್ದೇಶದಿಂದ ಅವರೆಲ್ಲ ಶಿವಮೊಗ್ಗಕ್ಕೆ ಆಗಮಿಸಿದ್ದರು. ಶಿವಮೊಗ್ಗ ನಗರ ವೀಕ್ಷಿಸಿ ರಾಗಿಗುಡ್ಡಕ್ಕೆ ಬಂದಿದ್ದರು.

ಈ ವೇಳೆ ರಾಗಿಗುಡ್ಡದಲ್ಲಿ ಅಹಿತಕರ ಘಟನೆಗಳು ನಡೆದ ನಂತರ, ಅವರು ತಮ್ಮ ಊರುಗಳಿಗೆ ಹಿಂದಿರುಗಿದ್ದರು. ಘಟನೆಗಳ ಸತ್ಯಾಸತ್ಯತೆ ಪರಾಮರ್ಶಿಸಿ ವರದಿ ಮಾಡುವಂತೆ ಮಾಧ್ಯಮದವರಿಗೆ ಸೂಚಿಸಿರುವ ಎಸ್ಪಿ ಅವರು, ರಾಗಿಗುಡ್ಡ ಘಟನೆಯ ಕುರಿತಂತೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಚಿಕಿತ್ಸೆ: ಘಟನೆಯಲ್ಲಿ ಎರಡು ಕೋಮಿನ ಕಡೆಯವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ಎರಡು ಕೋಮಿನ ಕಡೆಯ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಇದೇ ವೇಳೆ ಎಸ್ಪಿ ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *