ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 20 ರಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಶಿವಮೊಗ್ಗ, ಅ. 6: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅ.20 ರಿಂದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘವು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ, ವೃಂದ ಮತ್ತು ನೇಮಕಾತಿ  ನಿಯಮಗಳು ಪರಿಷ್ಕರಣೆಯಾಗಿ 12 ವರ್ಷಗಳಾಗಿವೆ. ಸದರಿ ನಿಯಮಗಳಲ್ಲಿ ಯಾವುದೇ ಬದಲಾವಣೆಯಾಗದಿದ್ದರೂ, 2016 ರಲ್ಲಿ ನೇಮಕವಾದ ಎಸ್.ಡಿ.ಎ – ಎಫ್.ಡಿ.ಎ – ವಾರ್ಡನ್ ಗಳಿಗೆ 2011 ರಲ್ಲಿ ಮುಂಬಡ್ತಿ ಆದೇಶ ನೀಡಲಾಗಿದೆ ಎಂದು ಸಂಘಟನೆ ದೂರಿದೆ.

ಇಲಾಖೆಯು ಶಿಕ್ಷಕರ ಸಮಸ್ಯೆ ಪರಿಹರಿಸುವುದಾಗಿ ಹೇಳಿ, ಶಿಕ್ಷಕರ ಸಂಘದ ಸಭೆ ನಡೆಸಿ ಭರವಸೆ ನೀಡಿದೆ. ಆದರೆ ಭರವಸೆಗಳು ಈಡೇರದ ಕಾರಣದಿಂದ 17-7-2023 ರಂದು ರಾಜ್ಯ ಮಟ್ಟದ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗಿತ್ತು. ಇಲಾಖೆ ಮೇಲಾಧಿಕಾರಿಗಳು ಧರಣಿ ಸಭೆಗೆ ಆಗಮಿಸಿ ನೀಡಿದ್ದ ಭರವಸೆಗಳು ಇಲ್ಲಿಯವರೆಗೂ ಕಾರ್ಯರೂಪಕ್ಕೆ ಬಂದಿಲ್ಲವಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಬೇಡಿಕೆಗಳು : ವೇತನ ತಾರತಮ್ಯ ಪರಿಹರಿಸಬೇಕು. ಶಿಕ್ಷಕರಿಗೆ ಅನ್ವಯವಾಗುವಂತೆ ಅಂತಿಮ ಸಂಯೋಜಿತ ಪದಕ್ರಮ ಪಟ್ಟಿ  ಬಿಡುಗಡೆಗೊಳಿಸಬೇಕು. ನವೋದಯ ಮಾದರಿ  ಶಾಲೆಯ ಸ್ನಾತಕೋತರ ಪದವೀಧರ ಶಿಕ್ಷಕರ ವೇತನ ತಾರತಮ್ಯ ನಿವಾರಿಸಬೇಕು.

ದೈಹಿಕ ಶಿಕ್ಷಕರಿಗೆ ಉನ್ನತಿಕರಿಸಿದ ಶಾಲೆಗಳಲ್ಲಿ ಉಪನ್ಯಾಸಕರ ಹುದ್ದೆಗಳನ್ನು ಸೃಜಿಸಿ ಮುಂಬಡ್ತಿಗೆ ಅವಕಾಶ ನೀಡಬೇಕು. ಆರ್ಟ್, ಕ್ರಾಪ್ಟ್ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರಿಗೆ ನೀಡುವ ವೇತನಕ್ಕೆ ಅನುಗುಣವಾಗಿ ಪರಿಷ್ಕರಣೆ ಮಾಡಬೇಕು.

ಎಂಓಡಿ ರದ್ದಾಗಬೇಕು. ಉನ್ನತಿಕರಿಸಿದ ಶಾಲೆಯ ಹೆಚ್ಚುವರಿ ಕಾರ್ಯಭಾರವನ್ನು ತೆರವುಗೊಳಿಸಬೇಕು. ಎಲ್ಲ ವೃಂದದ ನೌಕರರಿಗೂ ಅನುಕೂಲವಾಗುವ ರೀತಿಯಲ್ಲಿ ನೌಕರರ ಕಲ್ಯಾಣ ನಿಧಿ ಸ್ಥಾಪಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *