ತೀವ್ರ ಬರಗಾಲ – ನೀರಿಲ್ಲದೆ ಒಣಗುತ್ತಿರುವ ಬೆಳೆಗಳು : ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು!

ಶಿವಮೊಗ್ಗ, ಅ. 9: ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ, ಶಿವಮೊಗ್ಗ ಜಿಲ್ಲೆಯ ಹಲವೆಡೆ ತೀವ್ರ ಸ್ವರೂಪದ ಬರಗಾಲ ಸ್ಥಿತಿ ತಲೆದೋರಿದೆ. ಕೆಲ ಗ್ರಾಮಗಳಲ್ಲಿ ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗಿವೆ. ಕೃಷಿ ಬೆಳೆಗಳು ಒಣಗುತ್ತಿವೆ. ಇದು ಗ್ರಾಮಸ್ಥರನ್ನು ಕಂಗೆಡುವಂತೆ ಮಾಡಿದೆ.

ಈ ನಡುವೆ ಶಿವಮೊಗ್ಗ ತಾಲೂಕು ಬಸವನಗಂಗೂರು ಗ್ರಾಮಸ್ಥರು, ಮಳೆಗಾಗಿ ಪ್ರಾರ್ಥಿಸಿ ದೇವರ ಮೊರೆ ಹೋಗಿದ್ದಾರೆ. ತಾಲೂಕಿನ ಕೋಟೆಗಂಗೂರು ಗ್ರಾಮದಲ್ಲಿರುವ ಪುರಾತನ ಉದ್ಭವ ಈಶ್ವರ ಲಿಂಗಕ್ಕೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿದ್ದಾರೆ.

‘ಇತ್ತೀಚಿಗೀನ ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ ವರ್ಷ ತೀವ್ರ ಸ್ವರೂಪದ ಮಳೆ ಕೊರತೆ ಎದುರಾಗಿದೆ. ಇದರಿಂದ ಗ್ರಾಮದ ಕೆರೆಕಟ್ಟೆಗಳಲ್ಲಿ ನೀರಿನ ಸಂಗ್ರಹದಲ್ಲಿ ತೀವ್ರ ಕೊರತೆಯಾಗಿದೆ. ತೋಟ, ಗದ್ದೆಗಳಲ್ಲಿ ಬೆಳೆದ ಬೆಳೆಗಳಿಗೆ ನೀರು ಹಾಯಿಸಲು ಸಾಧ್ಯವಾಗದಂತಾಗಿದೆ.

ಈಗಲೇ ಈ ಪರಿಸ್ಥಿತಿಯಾದರೆ ಬೇಸಿಗೆಯಲ್ಲಿ ಮತ್ತಷ್ಟು ಸಮಸ್ಯೆ ಉಲ್ಬಣವಾಗುತ್ತದೆ. ಈ ಕಾರಣದಿಂದ ಮಳೆಗಾಗಿ ಪ್ರಾರ್ಥಿಸಿ ಕೋಟೆಗಂಗೂರಿನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿಕೊಂಡಿದ್ದೆವೆ. ಭಗವಂತನ ಕೃಪೆಯಿಂದ ಉತ್ತಮ ಮಳೆಯಾದರೆ ಸರ್ವರಿಗೂ ಅನುಕೂಲವಾಗುತ್ತದೆ’ ಎಂದು ಬಸವನಗಂಗೂರು ಗ್ರಾಮದ ಮುಖಂಡ ಕುಮಾರ್ ಅವರು ತಿಳಿಸಿದ್ದಾರೆ.

‘ಉದ್ಭವ ಈಶ್ವರ ಲಿಂಗಕ್ಕೆ ಸುತ್ತಮುತ್ತಲಿನ ಗ್ರಾಮಸ್ಥರು ನಿಯಮಿತವಾಗಿ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ದೇವಾಲಯವು ಅತ್ಯಂತ ಪುರಾತನ ಕಾಲದ್ದಾಗಿದೆ. ಪ್ರತಿ ವರ್ಷ ಬಸವನಗಂಗೂರು ಗ್ರಾಮಸ್ಥರು ದೇವಾಲಯಕ್ಕೆ ಆಗಮಿಸುತ್ತಾರೆ. ಪ್ರಸ್ತುತ ಊರಿನ ಜನರೆಲ್ಲ ಆಗಮಿಸಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ’ ಎಂದು ಕೋಟೆಗಂಗೂರು ಗ್ರಾಮದ ಮುಖಂಡರೂ ಆದ ದೇವಾಲಯದ ಅರ್ಚಕ ಬಸವರಾಜಪ್ಪ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *