ಸರ್ವರ್ ಡೌನ್ : ಬಿಪಿಎಲ್ ರೇಷನ್ ಕಾರ್ಡ್ ತಿದ್ದುಪಡಿಗೆ ಮುಂದುವರಿದ ಪರದಾಟ – ಗಮನಹರಿಸುವರೆ ಆಹಾರ ಸಚಿವರು?

ವರದಿ : ಬಿ. ರೇಣುಕೇಶ್

ಶಿವಮೊಗ್ಗ, ಅ. 18: ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಪಡಿತರ ಚೀಟಿ (ರೇಷನ್ ಕಾರ್ಡ್) ತಿದ್ದುಪಡಿಗೆ, ರಾಜ್ಯ ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಆದರೆ ‘ಸರ್ವರ್ ಡೌನ್’ ಸಮಸ್ಯೆಯಿಂದ ನಾಗರೀಕರು ಪರದಾಡುವಂತಾಗಿದೆ. ನಾಗರೀಕ ಸೇವಾ ಕೇಂದ್ರಗಳಲ್ಲಿ ದಿನಗಟ್ಟೆಲೆ ಬೀಡುವಂತಾಗಿದೆ!

ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಸಾಕಷ್ಟು ಸಂಖ್ಯೆಯ ನಾಗರೀಕರಿಗೆ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗಿರಲಿಲ್ಲ.

ನಾಗರೀಕರ ಒತ್ತಾಯದ ಮೇರೆಗೆ, ಇತ್ತೀಚೆಗೆ ರಾಜ್ಯ ಸರ್ಕಾರವು ಮತ್ತೇ ಮೂರು ದಿನಗಳ ಕಾಲಾವಾಕಾಶ ವಿಸ್ತರಣೆ ಮಾಡಿತ್ತು. ಈ ಬಾರಿ ನಾಗರೀಕ ಒನ್ ಕೇಂದ್ರಗಳಲ್ಲಿ ಮಾತ್ರ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ಸೈಬರ್ ಒನ್ ಕೇಂದ್ರಗಳಿಗೆ ನೀಡಿದ್ದ ಅವಕಾಶ ಹಿಂದೆಗೆದು ಕೊಂಡಿತ್ತು. ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ನೀಡಿದ್ದ ಮೂರು ದಿನಗಳ ಕಾಲಾವಕಾಶ ಅ. 18 ಕ್ಕೆ ಕೊನೆಗೊಳ್ಳುತ್ತಿದೆ.

ಆದರೆ ಆಹಾರ ಇಲಾಖೆಯ ವೆಬ್ ಸೈಟ್ ನಲ್ಲಿ ಸರ್ವರ್ ಡೌನ್ ಸಮಸ್ಯೆ ಎದುರಾಗಿತ್ತು. ನಿಗದಿತ ಪುಟ ತೆರೆದುಕೊಳ್ಳುತ್ತಿರಲಿಲ್ಲ. ಸೈಟ್ ಓಪನ್ ಆದರೂ ಒಂದು ಅರ್ಜಿ ಅಪ್ಲೋಡ್ ಮಾಡಲು ಗಂಟೆಗಟ್ಟಲೆ ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದ ಕೆಲ ನಾಗರೀಕರು ತಮ್ಮ ಕೆಲಸಕಾರ್ಯ ಬಿಟ್ಟು ನಾಗರೀಕ ಸೇವಾ ಕೇಂದ್ರಗಳ ಮುಂಭಾಗ ಗಂಟೆಗಟ್ಟಲೆ ಬೀಡುಬಿಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ದಿನವಿಡಿ ಕಾದು ಕುಳಿತುಕೊಳ್ಳುವಂತಾಗಿತ್ತು.

ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ನೀಡಿದ್ದ ಅವಕಾಶ ಅ. 18 ಕ್ಕೆ ಕೊನೆಗೊಳ್ಳುತ್ತಿದೆ. ಸರ್ವರ್ ಡೌನ್ ಸಮಸ್ಯೆಯಿಂದ ಸಾಕಷ್ಟು ಸಂಖ್ಯೆಯ ನಾಗರೀಕರು ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲವಾಗಿದೆ ಎಂಬ ಮಾಹಿತಿಗಳು ಸಾರ್ವಜನಿಕ ವಲಯದಿಂದ ಕೇಳಿಬರಲಾರಂಭಿಸಿದೆ.

ಗಮನಹರಿಸುವರೆ ಸಚಿವರು: ಸರ್ವರ್ ಡೌನ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು. ಸುಲಲಿತವಾಗಿ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ತಿದ್ದುಪಡಿಗೆ ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೆಲ ನಾಗರೀಕರು ಆಹಾರ ಸಚಿವರಿಗೆ ಒತ್ತಾಯಿಸುತ್ತಾರೆ.

ಒಂದೂವರೆ ವರ್ಷದ ನಂತರ ಲಭ್ಯವಾದ ಅವಕಾಶ!

**** ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನದ ನಂತರ, ಹೊಸದಾಗಿ ಬಿಪಿಎಲ್ ಪಡಿತರ ಚೀಟಿ ವಿತರಣೆ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿತ್ತು. ಆದರೆ ಸರ್ಕಾರವು ಬಿಪಿಎಲ್ ಪಡಿತರ ಚೀಟಿಯ ತಿದ್ದುಪಡಿಗೆ ಮಾತ್ರ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿತ್ತು. ಜೊತೆಗೆ ಹಾಲಿ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆಗೂ ಅನುಮತಿ ನೀಡಿತ್ತು. ಸರಿಸುಮಾರು ಒಂದೂವರೆ ವರ್ಷದ ನಂತರ ಲಭ್ಯವಾದ ಅವಕಾಶ ಸದ್ಭಳಕೆಗೆ ಸಾಕಷ್ಟು ಸಂಖ್ಯೆಯ ನಾಗರೀಕರು ಮುಂದಾಗಿದ್ದರು. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *