ಶಿವಮೊಗ್ಗ ದಸರಾ : ಗಜ ಪಡೆಗಳ ಕೊನೆ ಹಂತದ ತಾಲೀಮು!

ಶಿವಮೊಗ್ಗ, ಅ. 23: ನಾಡಹಬ್ಬ ದಸರಾದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗಿಯಾಗಲಿರುವ, ಸಕ್ರೆಬೈಲು ಆನೆ ಬಿಡಾರದ ಮೂರು ಗಜ ಪಡೆಗಳ ತಾಲೀಮು ಕಾರ್ಯ ಸೋಮವಾರ ಕೂಡ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಿತು.

ಮಂಗಳವಾರ ನಡೆಯಲಿರುವ ವಿಜಯದಶಮಿ ಮೆರವಣಿಗೆಯಲ್ಲಿ ಅಂಬಾರಿ ಹೊರಲಿರುವ ಸಾಗರ ಆನೆ ಮತ್ತು ಈತನಿಗೆ ಸಾಥ್ ನೀಡಲಿರುವ ನೇತ್ರಾವತಿ ಹಾಗೂ ಹೇಮಾವತಿ ಆನೆಗಳನ್ನು ವಿಜಯದಶಮಿ ಮೆರವಣಿಗೆ ಸಾಗಲಿರುವ ಮಾರ್ಗಗಳಲ್ಲಿ ಸೋಮವಾರ ಸಂಜೆ ಕರೆದೊಯ್ಯಲಾಯಿತು.

ಅತ್ಯಂತ ಆರಾಮದಾಯಕವಾಗಿ ಆನೆಗಳು ನಗರದ ಮುಖ್ಯ ರಸ್ತೆಗಳಲ್ಲಿ ಸಾಗಿದವು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸರು ಹಾಗೂ ಸಕ್ರೆಬೈಲು ಆನೆ ಬಿಡಾರದ ಮಾವುತರು, ಕಾವಾಡಿಗಳು ಉಪಸ್ಥಿತರಿದ್ದರು.

ಈ ಬಾರಿಯು ಕೂಡ ಸುಮಾರು 39 ವರ್ಷ ಪ್ರಾಯದ ಸಾಗರ್ ಆನೆ ಅಂಬಾರಿ ಹೊರಲಿದ್ದಾನೆ. ಈತನಿಗೆ 25 ವರ್ಷದ ನೇತ್ರಾವತಿ ಹಾಗೂ 9 ವರ್ಷದ ಹೇಮಾವತಿ ಆನೆಗಳು ಜೊತೆಯಾಗಲಿದ್ದಾರೆ.

ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಮೆರವಣಿಗೆ ಆರಂಭವಾಗಲಿದೆ. ರಾಮಣ್ಣಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್, ಶಿವಪ್ಪನಾಯಕ ಸರ್ಕಲ್, ಅಮೀರ್ ಅಹಮ್ಮದ್ ಸರ್ಕಲ್, ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯ ರಸ್ತೆ, ಜೈಲ್ ಸರ್ಕಲ್, ಜೈಲ್ ರಸ್ತೆ, ಲಕ್ಷ್ಮೀ ಚಿತ್ರಮಂದರಿ ಸರ್ಕಲ್ ಮೂಲಕ ಸಮಾರಂಭ ನಡೆಯುವ ಸ್ಥಳವಾದ ಫ್ರೀಡಂ ಪಾರ್ಕ್ ಗೆ ಮೆರವಣಿಗೆ ಆಗಮಿಸಲಿದೆ. ಬನ್ನಿ ಮುಡಿಯುವ ಕಾರ್ಯದ ನಂತರ ನವರಾತ್ರಿಯ ಸಂಭ್ರಮಕ್ಕೆ ಅಂತಿಮ ತೆರೆ ಬೀಳಲಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *