ಪತ್ತೆಯಾಗದ ವಾರಸುದಾರರು : ಅನಾಮಧೇಯ ಮೃತದೇಹದ ಶವ ಸಂಸ್ಕಾರ ನಡೆಸಿದ ಪೊಲೀಸರು

ಶಿವಮೊಗ್ಗ, ಅ. 25: ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ, ಪೊಲೀಸರೇ ಮುಂದೆ ನಿಂತು ಅನಾಮಧೇಯ ಮೃತದೇಹದ ಶವ ಸಂಸ್ಕಾರ ನಡೆಸಿದ ಘಟನೆ ಬುಧವಾರ ಶಿವಮೊಗ್ಗ ನಗರದಲ್ಲಿ ನಡೆದಿದೆ.

12-10-2023 ರಂದು ಹೊಳೆ ಬಸ್ ನಿಲ್ದಾಣ ಸಮೀಪದ ಪುಟ್’ಪಾತ್ ಬಳಿ ಸುಮಾರು 50 ರಿಂದ 55 ವರ್ಷ ವಯೋಮಾನದ ಅನಾಮಧೇಯ ಪುರುಷರೋರ್ವರ ಶವ ಪತ್ತೆಯಾಗಿತ್ತು.

ಮೃತ ವ್ಯಕ್ತಿಯ ಹೆಸರು, ವಿಳಾಸ ಸೇರಿದಂತೆ ಯಾವುದೇ ವಿವರಗಳು ತಿಳಿದುಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೃತ ದೇಹವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿತ್ತು.

ಪೊಲೀಸರ ತನಿಖೆ ವೇಳೆಯು ಮೃತರ ಪೂರ್ವಾಪರ ಹಾಗೂ ವಾರಸುದಾರರ ಮಾಹಿತಿ ತಿಳಿದುಬಂದಿರಲಿಲ್ಲ. ಈ ಕಾರಣದಿಂದ ಕೋಟೆ ಪೊಲೀಸ್ ಠಾಣೆ ಪಿಎಸ್ಐ ಕುಮಾರ್ ಮತ್ತವರ ಸಿಬ್ಬಂದಿಗಳು ಇಂದು ನಗರದ ನ್ಯೂ ಮಂಡ್ಲಿ ಸ್ಮಶಾನದಲ್ಲಿ ಮೃತ ದೇಹದ ಅಂತ್ಯ ಸಂಸ್ಕಾರ ನಡೆಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *