‘ನಾವಿಕ’ ದಿನಪತ್ರಿಕೆಗೆ ಪ್ರತಿಷ್ಠಿತ ‘ಆಂದೋಲನ ಪ್ರಶಸ್ತಿ’ ಗೌರವ

ಶಿವಮೊಗ್ಗ, ಫೆ. 9: ಶಿವಮೊಗ್ಗ ನಗರದಿಂದ ಪ್ರಕಟವಾಗುವ ‘ನಾವಿಕ’ ದಿನಪತ್ರಿಕೆಯು, ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ‘ಆಂದೋಲನ ಪ್ರಶಸ್ತಿ’ ಗೌರವಕ್ಕೆ ಪಾತ್ರವಾಗಿದೆ.
ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆ ವಿಭಾಗದಡಿ, ಅಕಾಡೆಮಿಯು ಪ್ರತಿವರ್ಷ ‘ಆಂದೋಲನ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. 2020 ನೇ ಸಾಲಿನ ಪ್ರಶಸ್ತಿ ಗೌರವಕ್ಕೆ ‘ನಾವಿಕ’ ದಿನಪತ್ರಿಕೆಯನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಮಾಹಿತಿ ನೀಡಿದೆ.
‘ಇತ್ತೀಚೆಗಷ್ಟೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಪುಟ ವಿನ್ಯಾಸಕ್ಕೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪತ್ರಿಕೆಗೆ ಲಭಿಸಿತ್ತು. ಇದೀಗ ಕರ್ನಾಟಕ ಮಾಧ್ಯಮ ಅಕಾಡೆಮಿಯು ಅತ್ಯುತ್ತಮ ಜಿಲ್ಲಾ ಮಟ್ಟದ ಪತ್ರಿಕೆ ವಿಭಾಗದಲ್ಲಿ ನೀಡುವ ಪ್ರತಿಷ್ಠಿತ ಆಂದೋಲನ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಇದು ಅತೀವ ಸಂತಸ ಉಂಟು ಮಾಡಿದೆ. ದಿವಂಗತರಾದ ತಮ್ಮ ತಂದೆ  ಎಸ್.ಹೆಚ್.ರಂಗಸ್ವಾಮಿಯವರ ಪರಿಶ್ರಮಕ್ಕೆ ಸಂದ ಪ್ರತಿಫಲವಾಗಿದೆ. ಕಳೆದ 46 ವರ್ಷಗಳಿಂದ ಪತ್ರಿಕೆ ಜನರಲ್ಲಿ ಉಳಿಸಿಕೊಂಡು ಬಂದಿರುವ ನಂಬಿಕೆಯ ದ್ಯೋತಕವಾಗಿದೆ’ ಎಂದು ‘ನಾವಿಕ’ ದಿನಪತ್ರಿಕೆ ಸುದ್ದಿ ಸಂಪಾದಕರಾದ ರಂಜಿತ್ ಅವರು ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →