ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?

ಶಿವಮೊಗ್ಗ, ನ. 4: ಶಿವಮೊಗ್ಗ ನಗರದ ಹೊರವಲಯ ಗೆಜ್ಜೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆಯೊಂದು ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಜನ ವಸತಿ ಪ್ರದೇಶದ ಬಳಿಯೇ ಸಂಚರಿಸುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ತಿಳಿಸಿದ್ದಾರೆ.

‘ಕಳೆದ ಹಲವು ದಿನಗಳಿಂದ ಜಾನುವಾರುಗಳು ಹಾಗೂ ನಾಯಿಗಳ ಮೇಲೆ ಚಿರತೆ ನಿರಂತರವಾಗಿ ದಾಳಿ ನಡೆಸುತ್ತಿದೆ. ಈಗಾಗಲೇ ಗ್ರಾಮದ ಹಲವು ಆಕಳುಗಳು ಮತ್ತು ನಾಯಿಗಳು ಚಿರತೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗೆ ಆಕಳು ಮತ್ತು  ಕರುವೊಂದರ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೂದ್ಯನಾಯ್ಕ್ ಅವರು ತಿಳಿಸಿದ್ದಾರೆ.

ಮತ್ತೊಂದೆಡೆ, ಗುರುವಾರ ರಾತ್ರಿ ಸೋಮಿನಕೊಪ್ಪ ಗ್ರಾಮದ ಹೊರವಲಯದ ಬಳಿಯೂ ಚಿರತೆಯೊಂದು ನಾಯಿಯನ್ನು ಬೆನ್ನಟ್ಟಿ ಹೋಗುತ್ತಿರುವುದನ್ನು ಸ್ಥಳೀಯ ಕಟ್ಟಡ ಕಾರ್ಮಿಕರೋರ್ವರು ನೋಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜನ ವಸತಿ ಪ್ರದೇಶಗಳ ಸಮೀಪದಲ್ಲಿಯೇ ಚಿರತೆ ಓಡಾಡುತ್ತಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ನಾಗರೀಕರ ಮೇಲೆ ಚಿರತೆ ದಾಳಿ ಮಾಡುವ ಮುನ್ನ ಅರಣ್ಯ ಇಲಾಖೆಯು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರ ಜೊತೆಗೆ, ಚಿರತೆ ಸೆರೆ ಹಿಡಿಯಲು ಕ್ರಮಕೈಗೊಳ್ಳಬೇಕು ಎಂದು ದೂದ್ಯನಾಯ್ಕ್ ಅವರು ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

One Comment on “ಚಿರತೆ ಹಾವಳಿಗೆ ಭಯಭೀತರಾದ ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಗ್ರಾಮಸ್ಥರು! : ಗಮನಹರಿಸುವುದೆ ಅರಣ್ಯ ಇಲಾಖೆ?”

  1. ಇನ್ನೂ ಜಾಗಕ್ಕ್ಕೆ ಭೇಟಿ ಕೊಡದೆ ನಿರ್ಲಕ್ಷ್ಯ ಮಾಸುತ್ತಿರುವುದು ಸರ್ಕಾರಿ ನೌಕರರ ಬೇಜವಾಬ್ದಾರಿತನ ತೋರಿಸಿತ್ತದೆ.. ಜನಸಂಖ್ಯೆ ಕೋಟಿ ಮೇಲೆ ಇದೆ, ಯಾರಾದ್ರೂ ಸಾಯಲಿ, ಹೆಂಗಿದ್ರು ಸರ್ಕಾರ ಪರಿಹಾರ ಕೊಡುತ್ತೆ ಅನ್ನುವ ಬಂಡ ಧೈರ್ಯ

Leave a Reply

Your email address will not be published. Required fields are marked *