ಟವಲ್ ನಿಂದ ಸ್ವಂತ ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಅಪಹರಿಸಿದ್ದವ ಪೊಲೀಸ್ ಬಲೆಗೆ!
ಭದ್ರಾವತಿ, ನ. 7: ಟವಲ್ ನಿಂದ ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಆರೋಪಿಯೋರ್ವನನ್ನು, ಘಟನೆ ನಡೆದ 24 ಗಂಟೆಯೊಳಗೆ ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಕುರುಬನಪುರ ಗ್ರಾಮದ ನಿವಾಸಿ ನಾಗರಾಜ್ ಕೆ. ಎನ್. (32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನಿಂದ 4.50 ಲಕ್ಷ ರೂ. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಸರವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ನಾಗರಾಜ್ ಕೆ.ಆರ್. ಮಾರ್ಗದರ್ಶನದಲ್ಲಿ ಸಿಪಿಐ ಶ್ರೀಶೈಲಕುಮಾರ್, ಪಿಎಸ್ಐ ರಮೇಶ್ ಟಿ, ಸಿಬ್ಬಂದಿಗಳಾದ ನವೀನ್, ಮಲ್ಲಿಕಾರ್ಜುನ, ರಾಕೇಶ್, ಗಿರೀಶ್, ವಿನೋದ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.
ಘಟನೆ ಹಿನ್ನಲೆ: ನ. 6 ರಂದು ಆರೋಪಿಯು ಭದ್ರಾವತಿ ಪಟ್ಟಣದ ಕಡದಕಟ್ಟೆಯಲ್ಲಿರುವ ತನ್ನ ಚಿಕ್ಕಮ್ಮನ ಮನೆಗೆ ಆಗಮಿಸಿದ್ದ. ಈ ವೇಳೆ ತನ್ನ ಬಳಿಯಿದ್ದ ಟವಲ್ ನಿಂದ ಚಿಕ್ಕಮ್ಮನ ಕುತ್ತಿಗೆ ಬಿಗಿದು ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ.
ಈ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 394 ರ ಅಡಿ ಪ್ರಕರಣ ದಾಖಲಾಗಿತ್ತು. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
More Stories
bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
Bhadravati: A love dispute that turned into a disaster – ended in the murder of two people!
ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
bhadravati news | ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
Bhadra river created flood threat in Bhadravati!
ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
