ಪೂಜೆಗಿಟ್ಟಿದ್ದ 12 ಗ್ರಾಂ ತೂಕದ ಚಿನ್ನದ ಸರವನ್ನೇ ನುಂಗಿದ ಹಸು..!

A cow swallowed a gold chain weighing 12 grams..! ಪೂಜೆಗಿಟ್ಟಿದ್ದ 12 ಗ್ರಾಂ ತೂಕದ ಚಿನ್ನದ ಸರವನ್ನೇ ನುಂಗಿದ ಹಸು..!

ಶಿವಮೊಗ್ಗ, ನ. 28: ಆಕಸ್ಮಿಕವಾಗಿ ಹಸುವೊಂದರ ಹೊಟ್ಟೆ ಸೇರಿದ್ದ 12 ಗ್ರಾಂ ತೂಕದ ಚಿನ್ನದ ಸರವನ್ನು, ಪಶುವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮತ್ತಿಮನೆ ಗ್ರಾಮದಲ್ಲಿ ನಡೆದಿದೆ.

ಶ್ಯಾಮ ಉಡುಪ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ದೀಪಾವಳಿ ಗೋಪೂಜೆ ಮಾಡುವ ವೇಳೆ ಮನೆಯವರು ಕಳಸಕ್ಕೆ ಚಿನ್ನದ ಸರವನ್ನಿಟ್ಟು ಪೂಜಿಸಿದ್ದರು. ಈ ವೇಳೆ ಪೂಜೆಗಿಟ್ಟಿದ್ದ ಪ್ರಸಾದದ ಜೊತೆಗೆ ಆಕಸ್ಮಿಕವಾಗಿ ಬಂಗಾರದ ಸರವನ್ನು ಕೂಡ ಹಸು ನುಂಗಿದೆ. ಇದು ಮನೆಯವರ ಗಮನಕ್ಕೆ ಬಂದಿರಲಿಲ್ಲ.

ಚಿನ್ನದ ಸರಕ್ಕಾಗಿ ಕುಟುಂಬದವರು ಎಲ್ಲೆಡೆ ಹುಡುಕಾಡಿದ್ದರೂ ಪತ್ತೆಯಾಗಿರಲಿಲ್ಲ. ತದನಂತರ ಬಂಗಾರದ ಸರ ಹಸುವಿನ ಹೊಟ್ಟೆ ಸೇರಿರುವ ಶಂಕೆ ವ್ಯಕ್ತಪಡಿಸಿದ್ದರು. ಈ ನಡುವೆ ಏಕಾಏಕಿ ಹಸುವು ಹುಲ್ಲು ತಿನ್ನುವುದನ್ನು ಕಡಿಮೆ ಮಾಡಿತ್ತು. ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು.

ಈ ಹಿನ್ನೆಲೆಯಲ್ಲಿ ಕುಟುಂಬದವರು ಪಶು ವೈದ್ಯರಿಗೆ ಮಾಹಿತಿ ನೀಡಿದ್ದು, ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿ ಡಾ.ಆನಂದ್ ಅವರು ಸ್ಥಳಕ್ಕಾಗಮಿಸಿ ಹಸುವನ್ನು ಪರಿಶೀಲಿಸಿದ್ದರು.

ಕಳೆದ ಭಾನುವಾರ ಶಸ್ತ್ರಚಿಕಿತ್ಸೆ ನಡೆಸಿ, ಹೊಟ್ಟೆಯಲ್ಲಿದ್ದ ಚಿನ್ನದ ಸರ ಹೊರತೆಗೆದಿದ್ದಾರೆ. ಸದ್ಯ ಹಸುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ. ಯಾವುದೇ ತೊಂದರೆಯಿಲ್ಲವಾಗಿದೆ ಎಂದು ಡಾ.ಆನಂದ್ ಅವರು ಮಾಹಿತಿ ನೀಡಿದ್ದಾರೆ.

*** ‘ಲೋಹದ ವಸ್ತುಗಳು ಜಾನುವಾರುಗಳ ಆರೋಗ್ಯಕ್ಕೆ ಹಾನಿಕಾರಕ. ಯಾವುದೇ ಕಾರಣಕ್ಕೂ ಲೋಹದ ವಸ್ತುಗಳನ್ನು ಜಾನುವಾರುಗಳು ಸೇವಿಸದಂತೆ ಸೂಕ್ತ ಮುನ್ನೆಚ್ಚರಿಕೆಯನ್ನು ಪಶುಪಾಲಕರು ವಹಿಸಬೇಕು’ ಎಂದು ಹಿರಿಯ ಪಶು ವೈದ್ಯಾಧಿಕಾರಿ ಡಾ.ಆನಂದ್ ಅವರು ಸಲಹೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *