ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

Applications are invited for filling up the vacant posts in Home Guards in various parts of Shimoga district ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಡಿ. 2:  ಸರ್ಕಾರದ ಸ್ವತಂತ್ರವಾದ ಶಿಸ್ತುಬದ್ದ ಹಾಗೂ ಸಮವಸ್ತ್ರದಾರಿ ಸ್ವಯಂಸೇವಕರನ್ನು ಒಳಗೊಂಡ ಸ್ವಯಂ ಸೇವಾ ಸಂಸ್ಥೆಯಾದ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ ಖಾಲಿ ಸ್ಥಾನಗಳನ್ನು ತುಂಬಲು  ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪುರುಷ ಒಟ್ಟು 171 ಮತ್ತು ಮಹಿಳೆ 08 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡಿ.08 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯ ರಸ್ತೆ, ಶಿವಮೊಗ್ಗ ಹಾಗೂ ಕೆಳಗೆ ತಿಳಿಸಲಾದ ಗೃಹರಕ್ಷಕ ದಳ ಘಟಕ / ಉಪ ಘಟಕಗಳ ಕಚೇರಿಗಳಲ್ಲಿ ದೊರೆಯಲಿದೆ.

ವಿವರ : ಶಿವಮೊಗ್ಗ  – ಪುರುಷ 39, ಮಹಿಳೆ 06 ಸಂಪರ್ಕಿಸಬೇಕಾದ ಘಟಕಾಧಿಕಾರಿ ಜಿ.ಇ.ಶಿವಾನಂದಪ್ಪ ಮೊ.ಸಂ: -9880705966. ಕುಂಸಿ –  ಪುರುಷ 05 : ಘಟಕಾಧಿಕಾರಿ ಪಿ.ಆರ್. ರಾಘವೇಂದ್ರ -9916573291, 

ಹಾರನಹಳ್ಳಿ – ಪುರುಷ 08 ಘಟಕಾಧಿಕಾರಿ : ಸಿ. ಮಧು – 9686631428. ಭದ್ರಾವತಿ –  ಪುರುಷ 17, ಮಹಿಳೆ 02 : ಘಟಕಾಧಿಕಾರಿ ಜಗದೀಶ್ – 9900283490. ಬಿ.ಆರ್.ಪಿ.- ಪುರುಷ 06 : ಘಟಕಾಧಿಕಾರಿ ಪಿ.ಮಹೇಶ – 9986760750, ಹೊಳೆಹೊನ್ನೂರು – ಪುರುಷ 11 : ಘಟಕಾಧಿಕಾರಿ ಹೆಚ್.ಎಸ್.ಸುನೀಲ್ ಕುಮಾರ್ – 8105840345.

ತೀರ್ಥಹಳ್ಳಿ – ಪುರುಷ 10 :  ಘಟಕಾಧಿಕಾರಿ ಹೆಚ್.ಪಿ.ರಾಘವೇಂದ್ರ – 9535388472. ಸಾಗರ – ಪುರುಷ 13 : ಘಟಕಾಧಿಕಾರಿ ಎಂ.ರಾಘವೇಂದ್ರ – 9632614031. ಜೋಗ – ಪುರುಷ 05 ಘಟಕಾಧಿಕಾರಿ ಡಿ.ಸಿದ್ದರಾಜು – 9449699459.

ಆನಂದಪುರ – ಪುರುಷ 07 : ಘಟಕಾಧಿಕಾರಿ ಎಂ.ರಾಘವೇಂದ್ರ – 9632614031. ಶಿಕಾರಿಪುರ – ಪುರುಷ 09 : ಡಾ.ಸಂತೋಷ್ ಎಸ್ ಶೆಟ್ಟಿ – 9845402789. ಶಿರಾಳಕೊಪ್ಪ- ಪುರುಷ 05 : ಘಟಕಾಧಿಕಾರಿ ಸೈಯದ್ ಇಸಾಕ್ – 8861492078.

ಹೊಸನಗರ – ಪುರುಷ 11 : ಘಟಕಾಧಿಕಾರಿ ಕೆ.ಅಶೋಕ್ – 9241434669. ರಿಪ್ಪನ್‍ಪೇಟೆ – ಪುರುಷ 11 : ಘಟಕಾಧಿಕಾರಿ ಟಿ. ಶಶಿಧರಾಚಾರ್ಯ – 9741477689. ಸೊರಬ – ಪುರುಷ 14 : ಘಟಕಾಧಿಕಾರಿ ಬಿ.ರೇವಣಪ್ಪ – 9945066084. 

ಅರ್ಹತೆ : ಗೃಹರಕ್ಷಕರಾಗಲು ಭಾರತೀಯ ಪ್ರಜೆಯಾಗಿರಬೇಕು. 19 ವರ್ಷ ಮೇಲ್ಪಟ್ಟು 45 ಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. 10 ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು.

ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆ / ಆರೋಪ ಅಥವಾ ಅಪರಾಧಿ ಎಂದು ನಿರ್ಣಯಿಸಲಾಗಿರದಿದ್ದಲ್ಲಿ/ ದಾಖಲಾಗಿರದಿದ್ದಲ್ಲಿ ಅಂತಹವರು ಹಾಗೂ ಘಟಕ ಇರುವ ಸ್ಥಳದಿಂದ ಸುಮಾರು 8 ರಿಮದ 12 ಕಿ.ಮೀ ಅಂತರದಲ್ಲಿರುವವರು ಅರ್ಜಿಗಳನ್ನು ಸಲ್ಲಿಸಬಹುದು ಎಂದು ಗೃಹರಕ್ಷಕದಳ ಜಿಲ್ಲಾ ಗೌರವ ಸಮಾದೇಷ್ಟರಾದ ಚಂದನ್ ಪಟೇಲ್ ಎಂ. ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *