ಶಿರಾಳಕೊಪ್ಪದಲ್ಲಿ ಅಡಕೆ ಕಳವು ಪ್ರಕರಣ : ಭಟ್ಕಳದ ಮೂವರು ಆರೋಪಿಗಳ ಬಂಧನ

Arecanut theft case in Shiralakoppa: Three accused arrested from Bhatkala ಶಿರಾಳಕೊಪ್ಪದಲ್ಲಿ ಅಡಕೆ ಕಳವು ಪ್ರಕರಣ : ಭಟ್ಕಳದ ಮೂವರು ಆರೋಪಿಗಳ ಬಂಧನ

ಶಿಕಾರಿಪುರ, ಡಿ. 7: ಅಡಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಠಾಣೆ ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಭಟ್ಕಳ ಪಟ್ಟಣದ ನಿವಾಸಿಗಳಾದ ಅಬ್ರಾರ್ ಶೇಖ್ (21), ಇಮ್ರಾನ್ (20)  ಹಾಗೂ ಅಬ್ದುಲ್ ವಾಹೀದ್ ತಾರ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಆರೋಪಿಗಳ ಬಂಧನದಿಂದ ಶಿರಾಳಕೊಪ್ಪ ಹಾಗೂ ಸಾಗರ ತಾಲೂಕು ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಅಡಕೆ ಕಳವು ಪ್ರಕರಣಗಳು ಪತ್ತೆಯಾಗಿವೆ.

ಆರೋಪಿಗಳಿಂದ 2,41,586 ರೂ. ಮೌಲ್ಯದ 5 ಕ್ವಿಂಟಾಲ್ 14 ಕೆಜಿ ತೂಕದ ಒಣ ಅಡಕೆ ಮತ್ತು ಕೃತ್ಯಕ್ಕೆ ಬಳಸಿದ್ದ 7 ಲಕ್ಷ ರೂ. ಮೌಲ್ಯದ ಬುಲೆರೋ ಕಾರು ವಶಕ್ಕೆ ಪಡೆಯಲಾಗಿದೆ. ಒಟ್ಟಾರೆ ಇವುಗಳ ಮೌಲ್ಯ 9,41,586 ರೂ.ಗಳಾಗಿದೆ ಎಂದು ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಕಳೆದ 17-11-2023 ರಂದು ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿಯ ರಮೇಶ್ ಎಂಬುವರು ತಮ್ಮ ವಾಸದ ಮನೆಯ ಮುಂದಿನ ಕಟ್ಟೆಯ ಮೇಲಿರಿಸಿದ್ದ 3 ಕ್ವಿಂಟಾಲ್ 50 ಕೆಜಿ ತೂಕದ ಒಣ ಅಡಕೆಯನ್ನು ಕಳವು ಮಾಡಲಾಗಿತ್ತು. ಈ ಕುರಿತಂತೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಶಿವಾನಂದ ಮದರಖಂಡಿ ಮಾರ್ಗದರ್ಶನದಲ್ಲಿ ಸಿಪಿಐ ರುದ್ರೇಶ್, ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ಎಸ್ ಕುರಿ,

ಸಿಬ್ಬಂದಿಗಳಾದ ಸಂತೋಷ್, ಸಲ್ಮಾನ್ ಖಾನ್, ಕಾರ್ತಿಕ್, ಅಶೋಕ ನಾಯ್ಕ್, ನಾಗರಾಜ, ಎಸ್ಪಿ ಕಚೇರಿಯ ತಾಂತ್ರಿಕ ಸಿಬ್ಬಂದಿಗಳಾದ ಹೆಚ್.ಸಿ.ಗುರುರಾಜ್, ಇಂದ್ರೇಶ್, ವಿಜಯ್ ರವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ಧಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *