ಬೈಕ್ ಮಾರ್ಪಡಿಸಿ, ಕರ್ಕಶ ಹಾರ್ನ್ ಅಳವಡಿಕೆ : ಯುವಕನಿಗೆ 16,500 ರೂ. ದಂಡ ವಿಧಿಸಿದ ಕೋರ್ಟ್!

Modification of bike installation of shrill horn : RS - 16500 Fine for the youth ಬೈಕ್ ಮಾರ್ಪಡಿಸಿ, ಕರ್ಕಶ ಹಾರ್ನ್ ಅಳವಡಿಕೆ : ಶಿವಮೊಗ್ಗದ ಯುವಕನಿಗೆ 16,500 ರೂ. ದಂಡ ವಿಧಿಸಿದ ಕೋರ್ಟ್!

ಶಿವಮೊಗ್ಗ, ಡಿ. 14: ಬೈಕ್ ಮಾರ್ಪಡಿಸಿ, ಕರ್ಕಶ ಶಬ್ದ ಹೊರಹೊಮ್ಮುವ ಹಾರ್ನ್ ಅಳವಡಿಸಿದ್ದ ಯುವಕನಿಗೆ, ಶಿವಮೊಗ್ಗದ 3 ನೇ ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು 16,500 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಧನಂಜಯ (19 ವರ್ಷ) ನ್ಯಾಯಾಲಯದಿಂದ ದಂಡ ಹಾಕಿಸಿಕೊಂಡ ಯುವಕ ಎಂದು ಗುರುತಿಸಲಾಗಿದೆ.

ಯುವಕನು ತನ್ನ ಬಳಿಯಿದ್ದ ಬಜಾಜ್ ಕವಾಸಕಿ ಬೈಕ್ ನ್ನು ಯಮಹಾ ಆರ್.ಎಕ್ಸ್. – 100 ರೀತಿ ಕಾಣುವ ಹಾಗೆ ಸಂಪೂರ್ಣ ಬದಲಾವಣೆ (Alteration) ಮಾಡಿಸಿಕೊಂಡಿದ್ದ. ಜೊತೆಗೆ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ ಅಳವಡಿಸಿಕೊಂಡಿದ್ದ.

ಈ ಕುರಿತಂತೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ನವೀನ್ ಕುಮಾರ್ ಮಠಪತಿ ಅವರು ಸದರಿ ಬೈಕ್ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದರು.

ಯುವಕನ ವಿರುದ್ದ ಐಎಂವಿ ಕಾಯ್ದೆಯಡಿ ಲಘು ಪ್ರಕರಣ ದಾಖಲಿಸಿದ್ದರು. ನಂತರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *