ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು…

ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು
ಭಾಗ್ಯ ಎಂ.ಟಿ., ವಾರ್ತಾ ಸಹಾಯಕರು, ವಾರ್ತಾ ಇಲಾಖೆ, ಶಿವಮೊಗ್ಗ.

ಸಿರಿಧಾನ್ಯಗಳ ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು. ಕಿರುಧಾನ್ಯಗಳಲ್ಲಿರುವ ಅಪಾರ ‘ಸಿರಿ’ ಯಿಂದಾಗಿ ಸಿರಿಧಾನ್ಯಗೆಳಂದು ಕರೆಯಲಾಗುತ್ತದೆ. ನಮ್ಮ ಆಹಾರ ಪದ್ದತಿಯಲ್ಲಿ ಇವು ಹಳೆಯ ಧಾನ್ಯಗಳಾಗಿದ್ದು, ಪ್ರಮುಖ ಸ್ಥಾನ ಪಡೆದಿವೆ.

 ರಾಗಿ, ಜೋಳ, ಸಜ್ಜೆ, ನವಣೆ, ಸಾಮೆ, ಹಾರಕ, ಬರಗು, ಕೊರಲೆ ಹಾಗೂ ಊದಲು ಇವೇ ಸಿರಿಧಾನ್ಯಗಳು ಅಥವಾ ನವ ಧಾನ್ಯಗಳು. ಸಿರಿ ಎಂದರೆ ಸಂಪತ್ತು. ಧಾನ್ಯ ಎಂದರೆ ಕಾಳುಗಳು. ಒಟ್ಟಾರೆ ಸಿರಿ ಧಾನ್ಯಗಳೆಂದರೆ ಪೌಷ್ಟಿಕಾಂಶಗಳೆಂಬ ಸಂಪತ್ತು ತುಂಬಿರುವ ಕಾಳುಗಳು. ಕೆಲವು ಸಿರಿಧಾನ್ಯಗಳಲ್ಲಿ ನಾರಿನಂಶ ಹೆಚ್ಚು. ಇನ್ನು ಕೆಲವು ಸಿರಿಧಾನ್ಯಗಳಲ್ಲಿ ಅಕ್ಕಿ, ಗೋಧಿಗಿಂತ ಹತ್ತು ಪಟ್ಟು ಹೆಚ್ಚಿನ ಕ್ಯಾಲ್ಸಿಯಂ ಮತ್ತು ಇತರ ಖನಿಜಗಳಿರುತ್ತವೆ. ಇಂತಹ ಸಿರಿಧಾನ್ಯಗಳ ಸೇವನೆ ಆರೋಗ್ಯಕ್ಕೆ ಉತ್ತಮವೆಂದು ಇತ್ತೀಚಿನ ಬಹಳಷ್ಟು ಸಂಶೋಧನೆ ತಿಳಿಸಿವೆ.

ಸಿರಿ ಧಾನ್ಯಗಳ ಉಪಯೋಗಗಳು :

ಇತ್ತೀಚಿನ ದಿನಗಳಲ್ಲಿ ಅಕ್ಕಿ ಎಂದರೆ ಕೇವಲ ಭತ್ತದ ಅಕ್ಕಿ ಎಂದರ್ಥ. ಆದರೆ ಹಿಂದೆ ನವಣಕ್ಕಿ, ಹಾರಕದಕ್ಕಿ, ಸಾಮಕ್ಕಿ, ನೆಲ್ಲಕ್ಕಿ ಹೀಗೆ ಹಲವಾರು ಬಗೆಯ ಅಕ್ಕಿಗಳಿರುತ್ತಿದ್ದವು. ಈ ಸಿರಿಧಾನ್ಯಗಳಿಂದ ಸಿದ್ಧಪಡಿಸಿದ ಅಡುಗೆ ಪೌಷ್ಟಿಕರ ಹಾಗೂ ರುಚಿ ಕೂಡ ಹೆಚ್ಚು. ಆದ್ದರಿಂದಲೇ ಈ ಧಾನ್ಯಗಳಿಂದ ತಯಾರಿಸಿದ ಪಾಯಸ, ರೊಟ್ಟಿ, ಮುದ್ದೆ, ಉಂಡೆ ಮುಂತಾದ ಖಾದ್ಯಗಳನ್ನು ಸೇವಿಸಿದರೆ ಬಹಳ ಹೊತ್ತು ಹಸಿವಾಗುತ್ತಿರಲಿಲ್ಲ.

Rich in Nutrients 'Siri Grain' - Small in Size but Big in Role...

ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು

ಹಿರಿಯರು ಸಿರಿಧಾನ್ಯಗಳನ್ನೇ ಸೇವಿಸಿ ಬಹುಕಾಲ ಯಾವುದೇ ರೋಗ ರುಜಿನಗಳಿಲ್ಲದೇ ಬದುಕುತ್ತಿದ್ದರು. ಸಿರಿಧಾನ್ಯಗಳಲ್ಲಿ ನಾರು ಮತ್ತು ಕಬ್ಬಿಣದ ಅಂಶಗಳು, ಕಾರ್ಬೋಹೈಡ್ರೇಟ್‍ಗಳು ಮತ್ತು ಕೊಬ್ಬಿನಂಶಗಳು ಬೇರೆಯ ಧಾನ್ಯಗಳಿಗೆ ಹೋಲಿಸಿದರೆ ಹೆಚ್ಚಾಗಿವೆ. ಜೊತೆಗೆ ಇವುಗಳಲ್ಲಿ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‍ಗಳು ಮತ್ತು ರೋಗ ನಿರೋಧಕ ಶಕ್ತಿ ಇರುವುದರಿಂದ ಪೌಷ್ಟಿಕತೆಯ ಕಣಜಗಳೇ ಆಗಿವೆ.

ಅಕ್ಕಿ ಮತ್ತು ಗೋಧಿಗಿಂತ ಐದು ಪಟ್ಟು ಪೆÇ್ರೀಟಿನ್, ವಿಟಮಿನ್, ನಾರಿನಂಶ ಹಾಗೂ ಖನಿಜಗಳು ಸಿರಿಧಾನ್ಯಗಳಲ್ಲಿವೆ. ಸಾಮೆ ಮತ್ತು ನವಣೆಗಳು ಪೆÇೀಷಕಾಂಶಗಳ ಸಿರಿಗಳೇ ಆಗಿವೆ. ಅದೇ ಅಕ್ಕಿ, ರಾಗಿ ಮತ್ತು ಗೋಧಿ ತಿನ್ನುವುದರ ಬದಲಿಗೆ ವಿವಿಧ ಪೆÇೀಷಕಾಂಶಗಳ ಗಣಿಗಳೇ ಆಗಿರುವ ಸಿರಿಧಾನ್ಯಗಳ ಸೇವನೆ ಇಂದು ಆರೋಗ್ಯಕ್ಕಾಗಿ ಅಗತ್ಯವಾಗಿದೆ. 

ಮದುಮೇಹ ತೂಕ ಇಳಿಕೆಗೆ ಉತ್ತಮ ಆಹಾರ : ಕನಿಷ್ಠ ಗ್ಲೈಸೆಮಿಕ್ ಸೂಚ್ಯಂಕವು ಸಿರಿಧಾನ್ಯವನ್ನು ಅಕ್ಕಿಗೆ ಉತ್ತಮ ಬದಲಿಯಾಗಿ ಶಿಫಾರಸ್ಸು ಮಾಡಬಹುದು. ಕೊಲೆಸ್ಟ್ರಾಲ್, ಮಧುಮೇಹ ಮತ್ತು ತೂಕ ಇಳಿಕೆಗೆ ಈ ಧಾನ್ಯಗಳು ಬಹಳ ಉತ್ತಮ ಆಹಾರವಾಗಿದೆ.

ಸಿರಿಧಾನ್ಯಗಳ ಕೃಷಿ ಮಾಡುವ ಬಗೆ :

ಸಿರಿಧಾನ್ಯಗಳನ್ನು ಬೆಳೆಯಲು ಫಲವತ್ತಾದ ಭೂಮಿಯೇ ಬೇಕು ಎಂದಿಲ್ಲ. ತೆಳ್ಳನೆಯ ಮಣ್ಣಿನ ಪದರದ ನೆಲದಲ್ಲಿಯೂ ಸಿರಿಧಾನ್ಯಗಳು ಚೆನ್ನಾಗಿ ಬೆಳೆಯುತ್ತವೆ. ಕಲ್ಲಿನ ಜಮೀನಿನಲ್ಲಿ ಹಾರಕ ಹಾಗೂ ಕೊರಲೆ ಬೆಳೆಯುತ್ತವೆ. ಇಂತಹ ವಿಶಿಷ್ಟ ಗುಣಗಳಿಂದಲೇ ಸಿರಿಧಾನ್ಯಗಳು ರೈತರಿಗೆ ವರದಾನವಾಗಿರುವ ಬೆಳೆಗಳಾಗಿವೆ. ಈ ಧಾನ್ಯಗಳನ್ನು ಬೆಳೆಯಲು ರೈತರು ರಾಸಾಯನಿಕ ಗೊಬ್ಬರವನ್ನು ನೆಚ್ಚಿಕೊಂಡಿಲ್ಲ. ಕೊಟ್ಟಿಗೆ ಗೊಬ್ಬರ, ತರಗೆಲೆ ಗೊಬ್ಬರ ಬಳಸಿ ಸಿರಿಧಾನ್ಯಗಳನ್ನು ಬೆಳೆಯುತ್ತಾರೆ. ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸದೇ ಇರುವುದರಿಂದ ಪರಿಸರದ ಮೇಲೂ ಕೆಟ್ಟ ಪರಿಣಾಮ ಬೀರುವುದಿಲ್ಲ. ಈ ಧಾನ್ಯಗಳನ್ನು ಬೆಳೆಯಲು ಹೆಚ್ಚಿನ ನೀರು, ಗೊಬ್ಬರ ಮತ್ತು ಆರೈಕೆಯ ಅವಶ್ಯಕತೆ ಇಲ್ಲ. ಮಳೆಯಾಧಾರಿತವಾಗಿ ಹಾಗೂ ಎಲ್ಲಾ ಹವಾಮಾನಕ್ಕೂ ಹೊಂದಿಕೊಂಡು ಬೆಳೆಯುವ ಈ ಧಾನ್ಯಗಳು ನಿಜಕ್ಕೂ ಸಿರಿಧಾನ್ಯಗಳೇ ಆಗಿವೆ.

Rich in Nutrients 'Siri Grain' - Small in Size but Big in Role...

ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು

ಸಿರಿಧಾನ್ಯಗಳು ಸಾಮಾನ್ಯವಾಗಿ ಅಲ್ಪಾವಧಿ ಬೆಳೆಯಾಗಿದ್ದು, ಮಳೆಯಾಶ್ರಿತ ಪ್ರದೇಶಗಳಿಗೆ ಸೂಕ್ತವಾಗಿದೆ. ಬರ ಸಹಿಷ್ಣು ಬೆಳೆಗಳು ಮತ್ತು ಹವಾಮಾನ ವೈಪರೀತ್ಯಕ್ಕೆ ಹೊಂದಿಕೊಂಡು ಬೆಳೆಯುವ ಬೆಳೆಗಳು ಆಗಿರುತ್ತವೆ. ಕೀಟ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಕಡಿಮೆ ಉತ್ಪಾದನಾ ವೆಚ್ಚ ಮತ್ತು ಉತ್ತಮ ಇಳುವರಿ ಕೊಡಬಲ್ಲ ಪರಿಸರ ಸ್ನೇಹಿ ಬೆಳೆಗಳು. ಸತ್ವಯುತ ಆಹಾರಗಳು, ಗಾತ್ರದಲ್ಲಿ ಕಿರಿದಾದರು ಪೆÇೀಷಣಾ ಮೌಲ್ಯದಲ್ಲಿ ಹಿರಿಯದು.

ಶಿವಮೊಗ್ಗ ಜಿಲ್ಲೆಯಲ್ಲಿ ಶಿಕಾರಿಪುರದ ಸುಮಾರು25 ರಿಂದ 30 ಹೆಕ್ಟೇರ್ ಪ್ರದೇಶದಲ್ಲಿ ರಾಗಿ, ನವಣೆ, ಸಜ್ಜೆ, ಬರಗು, ಹಾರಕ ಬೆಳೆಯಲಾಗುತ್ತದೆ. ಶಿವಮೊಗ್ಗದಲ್ಲಿ ಸುಮಾರು 25 ಹೆ. ಹಾಗೂ ಸೊರಬದಲ್ಲಿ ಸುಮಾರು 10 ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ.

ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಪೂರ್ಣಿಮಾ

ಪೌಷ್ಟಿಕಾಂಶದ ಸಂಪತ್ತಾಗಿರುವ ಸಿರಿಧಾನ್ಯಗಳ ಕುರಿತು ಅರಿವು ಮತ್ತು ಮಹತ್ವವನ್ನು ಜನರಿಗೆ ತಿಳಿಸಲು ಹಾಗೂ ಸಿರಿಧಾನ್ಯಗಳ ಬೆಳೆಯನ್ನು ಉತ್ತೇಜಿಸಲು 2023 ನೇ ಸಾಲನ್ನು ಅಂತರಾಷ್ಟ್ರೀಯ ಮಿಲೆಟ್ಸ್(ಸಿರಿಧಾನ್ಯ)ವರ್ಷವೆಂದು  ಘೋಷಿಸಲಾಗಿದೆ. ಸಿರಿಧಾನ್ಯದ ಕುರಿತು ಹೆಚ್ಚಿನ ಅರಿವು ಮೂಡಿಸಲು ಶಿವಮೊಗ್ಗದಲ್ಲಿ ಡಿ.22 ರಂದು ‘ಸಿರಿಧಾನ್ಯ ಜಾಥಾ’ ಮತ್ತು ಡಿ.27 ರಂದು ‘ಸಿರಿಧಾನ್ಯ ಮೇಳ’ ಆಯೋಜಿಸಲಾಗಿದೆ. ಹೆಚ್ಚಿನ ಜನರು ಪಾಲ್ಗೊಂಡು ಇದರ ಉಪಯೋಗ ಪಡೆಯಬೇಕು.

ಸಿರಿ ಧಾನ್ಯಗಳನ್ನು ಬಳಸುವ ವಿಧಾನಗಳು :

ಹಿಂದೆ ಈ ಕಿರುಧಾನ್ಯಗಳು ಬಡವರು ಮತ್ತು ಹಳ್ಳಿ ಜನರಿಗೆ ಮಾತ್ರ ಎಂಬ ಮಾತಿದ್ದು, ಇಂದು ಬದಲಾಗಿದೆ. ಪೌಷ್ಠಿಕಾಂಶಗಳ ಸಿರಿಯಾದ ಈ ಧಾನ್ಯಗಳಿಂದ ಈಗ ಹೋಟೆಲುಗಳು ಖಾದ್ಯಗಳನ್ನು ತಯಾರಿಸುತ್ತಿದ್ದು ಜನಪ್ರಿಯವಾಗುತ್ತಿವೆ. ಒಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗಿಂತ ಹೆಚ್ಚಾಗಿ ನಗರ ವಾಸಿಗಳು ಸಿರಿಧಾನ್ಯಗಳನ್ನು ಸ್ವಾಗತಿಸಿದ್ದಾರೆ. ನಗರಗಳು, ಪಟ್ಟಣಗಳು ಮತ್ತು ಮಹಾನಗರಗಳ ಸಾವಯವ ಕೃಷಿಯ (ಆರ್ಗಾನಿಕ್ ಫಾರ್ಮಿಂಗ್) ಅಂಗಡಿಗಳಲ್ಲಿ ಹಲವು ಬಗೆ ಸಿರಿಧಾನ್ಯಗಳು ಸಿಗುತ್ತಿವೆ.

Rich in Nutrients 'Siri Grain' - Small in Size but Big in Role...

ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು

ಅನ್ನ, ರಾಗಿ, ಗೋಧಿ ಅಷ್ಟೇ ತಿಂದುಗೊತ್ತಿರುವ ಜನರಿಗೆ ಈಗ ಸಿರಿಧಾನ್ಯಗಳನ್ನು ಸವಿಯುವ ಸಂಕ್ರಮಣ ಕಾಲ. ನವಣೆ, ಆರ್ಕ, ಸಾಮೆ, ಊದಲು, ಬರಗು, ಸಜ್ಜೆ, ಕೊರಲು ಹೆಸರೇ ಗೊತ್ತಿಲ್ಲದ ಜನ ಈಗ ಸಿರಿಧಾನ್ಯಗಳ ಖರೀದಿಯಲ್ಲಿ ತೊಡಗಿದ್ದಾರೆ. ಇಂದು ಅನೇಕ ನಗರಗಳಲ್ಲಿ ನಡೆಯುತ್ತಿರುವ ಸಿರಿಧಾನ್ಯ ಮೇಳಗಳಲ್ಲಿ ಜನವೋ ಜನ. ಸಿರಿಧಾನ್ಯ ಅಡುಗೆ ರೆಸಿಪಿ ಪುಸ್ತಕಗಳಿಗೆ ಎಲ್ಲಿಲ್ಲದ ಬೇಡಿಕೆ. ಸಿರಿಧಾನ್ಯಗಳು ಮಾಲ್‍ಗಳಿಗೂ ಲಗ್ಗೆ ಇಟ್ಟಿವೆ. ಧಾನ್ಯ ಮಾತ್ರವಲ್ಲ, ಹಿಟ್ಟು, ರವೆಗಳೂ ಸಿಗುತ್ತಿವೆ. ಇನ್ನು ಚಕ್ಕುಲಿ, ಹಪ್ಪಳ, ಕೋಡುಬಳೆ, ನಿಪ್ಪಟ್ಟು, ಉಂಡೆ, ಕಜ್ಜಾಯ, ಹೋಳಿಗೆ, ಬರ್ಫಿ ಎಲ್ಲಾ ಬಗೆಯ ಸಿಹಿ ಮತ್ತು ಕುರುಕಲು ತಿಂಡಿಗಳೂ ಸಿರಿಧಾನ್ಯಗಳಲ್ಲಿ ಇಂದು ದೊರಕುತ್ತಿವೆ.

ನಮ್ಮ ದೈನಂದಿನ ಆಹಾರದಲ್ಲಿ ಸಿರಿಧಾನ್ಯವನ್ನು ಬಳಸಬಹುದಾದ ಬಗೆಗಳು :

ಒಂದು ಹೊತ್ತಿನ ಊಟಕ್ಕೆ ಅನ್ನದ ಬದಲು ಸಿರಿಧಾನ್ಯ ಬಳಸಿ ಮತ್ತು ವ್ಯತ್ಯಾಸವನ್ನು ಅನುಭವಿಸಿ. ಮನೆಯಲ್ಲಿ ದೋಸೆ ಹಿಟ್ಟು ತಯಾರಿಸುವಾಗ ಅಕ್ಕಿ ಬದಲಿಗೆ ಸಿರಿಧಾನ್ಯ ಬಳಸಿ. ಅಥವಾ ಅದನ್ನು ಅರ್ಧ ಕಿರುಧಾನ್ಯ ಮತ್ತು ಅಕ್ಕಿ ಮಿಶ್ರಣದಿಂದ ಪ್ರಯತ್ನಿಸಿ. ಅಕ್ಕಿಗೆ ಬದಲಾಗಿ ಸಾಕಷ್ಟು ತರಕಾರಿಗಳು ಮತ್ತು ಕಿರುಧಾನ್ಯ ಬಳಸಿ ಪಲಾವ್ ತಯಾರಿಸಿ.  ತಾಳೆ ಬೆಲ್ಲ ಅಥವಾ ಬೆಲ್ಲದೊಂದಿಗೆ ರಾಗಿ ಪಾಯಸ ಮಾಡಿ. ಉಪಹಾರಕ್ಕೆ ಓಟ್ಸ್ ಬದಲಿಗೆ ಸಿರಿಧಾನ್ಯ ಪ್ರಯತ್ನಿಸಿ. ಬರ್ಗರ್, ಸೂಪ್‍ಗಳನ್ನು ಸಹ ಸಿರಿಧಾನ್ಯಗಳಿಂದ ತಯಾರಿಸಿ ಸವಿಯಬಹುದು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *