ಶಿವಮೊಗ್ಗ : ಪೂರ್ಣ ಹಂತಕ್ಕೆ ವರ್ತುಲಾಕಾರದ ಫ್ಲೈ ಓವರ್ ಕಾಮಗಾರಿ – ಉದ್ಘಾಟನೆ ಯಾವಾಗ?

Shimoga: Circular flyover work in full phase - when will it be inaugurated? ಶಿವಮೊಗ್ಗ : ಪೂರ್ಣ ಹಂತಕ್ಕೆ ವರ್ತುಲಾಕಾರದ ಫ್ಲೈ ಓವರ್ ಕಾಮಗಾರಿ – ಉದ್ಘಾಟನೆ ಯಾವಾಗ

ಶಿವಮೊಗ್ಗ, ಜ. 7: ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡು ಈಗಾಗಲೇ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

ಇದೀಗ ನಗರದ ವಿದ್ಯಾನಗರದ ಬಳಿ ನಿರ್ಮಿಸಲಾಗುತ್ತಿದ್ದ, ವರ್ತುಲಾಕಾರದ ಫ್ಲೈ ಓವರ್ ಕಾಮಗಾರಿಯೂ ಪೂರ್ಣ ಹಂತಕ್ಕೆ ಬಂದಿದೆ. ಇಷ್ಟರಲ್ಲಿಯೇ ಸಾರ್ವಜನಿಕರ ಸೇವೆಗೆ ಮುಕ್ತಗೊಳ್ಳುವ ಸಾಧ್ಯತೆಯಿದೆ.

ಭಾನುವಾರ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಫ್ಲೈ ಓವರ್ ಕಾಮಗಾರಿಯ ಖುದ್ದು ವೀಕ್ಷಣೆ ಮಾಡಿದರು. ರಾಷ್ಟ್ರೀಯ ಹೆದ್ಧಾರಿ ಇಲಾಖೆ ಎಂಜಿನಿಯರ್ ಗಳಿಂದ ಮಾಹಿತಿ ಪಡೆದುಕೊಂಡರು.

ಬಾಕಿ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಜಿನಿಯರ್ ಪೀರ್ ಪಾಷಾ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಜನ – ವಾಹನ ಸಂಚಾರಕ್ಕೆ ಅನುಕೂಲ : ವಿದ್ಯಾನಗರದ ಮೇಲ್ಸೇತುವೆ ಕಾಮಗಾರಿಯು ಕಳೆದ ಸರಿಸುಮಾರು ಎರಡು ವರ್ಷದಿಂದ ನಡೆಯುತ್ತಿತ್ತು. ಕಾಮಗಾರಿ ವಿಳಂಬ ಕಾರಣದಿಂದ ಸದರಿ ಸ್ಥಳದಲ್ಲಿ ಜನ – ವಾಹನ ಸಂಚಾರ ದುಸ್ತರವಾಗಿ ಪರಿಣಮಿಸಿತ್ತು. ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸಂಸದರು ರಾಷ್ಟ್ರೀಯ ಹೆದ್ದಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದರು.

ವಿಶಿಷ್ಟ ಫ್ಲೈ ಓವರ್ : ಸದರಿ ಫ್ಲೈ ಓವರ್ ವರ್ತುಲಾಕಾರದಿಂದ ಕೂಡಿರುವುದು ವಿಶಿಷ್ಠತೆಗಳಲ್ಲೊಂದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಯೋಜನೆಯಾಗಿದ್ದು, 43 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಒಟ್ಟು 920 ಮೀಟರ್ ಉದ್ದವಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *