ಟಿವಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಲು ಸಾರ್ವಜನಿಕರಿಗೆ ಮನವಿ

Appeal to public to complain if objectionable programs are aired on TVs ಟಿವಿಗಳಲ್ಲಿ ಆಕ್ಷೇಪಾರ್ಹ ಕಾರ್ಯಕ್ರಮಗಳು ಪ್ರಸಾರವಾದರೆ ದೂರು ನೀಡಲು ಸಾರ್ವಜನಿಕರಿಗೆ ಮನವಿ

ಶಿವಮೊಗ್ಗ, ಜ. 18 : ಜಿಲ್ಲೆಯಲ್ಲಿ ಕೇಬಲ್ ಟಿವಿ (cabel tv) ಹಾಗೂ ಉಪಗ್ರಹ ಟಿವಿ ವಾಹಿನಿ (satellite tv channels) ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ದೂರುಗಳಿದ್ದಲ್ಲಿ, ಶಿವಮೊಗ್ಗದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ  ದೂರುಗಳನ್ನು ಸಲ್ಲಿಸಬಹುದಾಗಿದೆ.

ಕೇಬಲ್ ಟೆಲಿವಿಷನ್ ನೆಟ್’ವರ್ಕ್ (ರೆಗ್ಯುಲೇಶನ್) ಆಕ್ಟ್ (act) 1995 ರ ಪರಿಚಯದ 6 ಕಾರ್ಯಕ್ರಮ ಸಮಿತಿಯಂತೆ, ಪ್ರಸಾರವಾಗುವ ಕಾರ್ಯಕ್ರಮಗಳು ಸದಭಿರುಚಿ ಅಥವಾ ಸಭ್ಯತೆ ವಿರುದ್ಧ,

ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತಹ ಉದ್ದೇಶಪೂರ್ವಕ ಸುಳ್ಳು,

ಸೂಚನಾತ್ಮಕ ವ್ಯಂಗ್ಯೋಗ್ತಿ, ಅರ್ಧ ಸತ್ಯ, ಹಿಂಸೆಯನ್ನು ಉತ್ತೇಜಿಸುವ, ಪ್ರಚೋದಿಸುವ, ಕಾನೂನು ಮತ್ತು ಶಿಸ್ತು ಪಾಲನೆ ಕೆಣಕುವುದು, ರಾಷ್ಟ್ರ ವಿರೋಧಿ ಭಾವನೆಯನ್ನು ಉತ್ತೇಜಿಸುವುದು ಅಥವಾ ನ್ಯಾಯಾಲಯ ನಿಂದನೆಗೆ ಕಾರಣವಾಗುವಂತಹ ಅಂಶಗಳು ಕಂಡು ಬಂದರೆ ಯಾವುದೇ ನಾಗರೀಕರು ಅದರ ವಿರುದ್ಧ ವಾರ್ತಾ ಇಲಾಖೆಗೆ ದೂರು ಸಲ್ಲಿಸಬಹುದಾಗಿದೆ.

ಕಾಯ್ದೆಯ ಪರಿಚ್ಛೇದ 7 ರಂತೆ ಜಾಹೀರಾತು ಸಂಹಿತೆಗೆ ಸಂಬಂಧಿಸಿದಂತೆ ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಜಾಹೀರಾತುಗಳು ದೇಶದ ಕಾನೂನುಗಳಿಗೆ ಪೂರಕವಾಗಿರಬೇಕು. ಚಂದದಾರರ ನೈತಿಕತೆ ಮತ್ತು ಸಭ್ಯತೆ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಬಾರದು.

ಯಾವುದೇ ಮತ, ಜಾತಿ, ವರ್ಣ, ಕೋಮು ಮತ್ತು ರಾಷ್ಟ್ರೀಯತೆಯನ್ನು ಅವಹೇಳನ ಮಾಡಬಾರದು. ಭಾರತ ಸಂವಿಧಾನದ ಯಾವುದೇ ಉಪಬಂಧದ ವಿರುದ್ಧವಿರಬಾರದು. ಜನರನ್ನು ಅಪರಾಧಕ್ಕೆ ಪ್ರಚೋದಿಸುವುದಾಗಲಿ, ಅಶಾಂತಿ ಅಥವಾ ಹಿಂಸೆಗೆ ಯಾವುದೇ ರೀತಿಯ ಅಶ್ಲೀಲತೆಗೆ ಕಾರಣವಾಗುವುದಕ್ಕೆ ಅವಕಾಶ ಉಂಟಾಗಬಾರದು.

ಅಪರಾಧಿಕರಣ ಬಯಸುವಂತೆ ಬಿಂಬಿಸಬಾರದು ಹಾಗೂ ರಾಶಿಯ ಲಾಂಛನ, ಸಂವಿಧಾನದ ಯಾವುದೇ ಭಾಗ ಅಥವಾ ವ್ಯಕ್ತಿ ರಾಷ್ಟ್ರೀಯ ನಾಯಕರ ವ್ಯಕ್ತಿತ್ವ ಅಥವಾ ರಾಷ್ಟ್ರದ ಗಣ್ಯರ ಶೋಷಣೆ ಆಗಬಾರದು. ಇವುಗಳನ್ನು ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಸಾರ್ವಜನಿಕರು ದೂರುಗಳನ್ನು ಸಂಬಂಧಿಸಿದ ಜಿಲ್ಲಾ ನಿರ್ವಹಣಾ ಸಮಿತಿಗೆ ಅಥವಾ ರಾಜ್ಯ ನಿರ್ವಹಣಾ ಸಮಿತಿಗೆ ಸಲ್ಲಿಸಬಹುದಾಗಿದೆ.

ಕೇಬಲ್ ಟಿವಿ ಹಾಗೂ ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳಲ್ಲಿ ಯಾವುದೇ ಆಕ್ಷೇಪಗಳು ಕಂಡು ಬಂದಲ್ಲಿ ಜಿಲ್ಲಾ ನಿರ್ವಹಣಾ ಸಮಿತಿ,  ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಅಥವಾ ಮೊಬೈಲ್ ಸಂಖ್ಯೆ 9480841222 ಅಥವಾ ಇ-ಮೇಲ್ ವಿಳಾಸ varthabhavansmg1@gmail.com ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *