‘ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ’ : ಮಾಜಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ಅಭಿಪ್ರಾಯ

'The salvation of the country is possible with value-based politics': Former Speaker DH Shankaramurthy's opinion ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ : ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅಭಿಪ್ರಾಯ

ಶಿವಮೊಗ್ಗ, ಜ. 27: ಮೌಲ್ಯಾಧಾರಿತ ರಾಜಕಾರಣದಿಂದ ದೇಶದ ಉದ್ಧಾರ ಸಾಧ್ಯ, ದೇಶಕ್ಕೆ ಇದರ ಅಗತ್ಯವಿದೆ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿಗಳಾದ ಡಿ.ಎಚ್‌.ಶಂಕರಮೂರ್ತಿ ಅಭಿಪ್ರಾಯಿಸಿದರು. 

ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್‌ ಹಾಲ್‌ನಲ್ಲಿ ಶನಿವಾರ ವಿಧಾನ ಪರಿಷತ್‌ ಸದಸ್ಯ  ಎಸ್‌.ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರಮದಿಂದ ಸಾರ್ಥಕತೆಯಡೆಗೆ ವಿಚಾರಗೋಷ್ಠಿಯಲ್ಲಿ ಮೌಲ್ಯಾಧಾರಿತ ರಾಜಕಾರಣ ವಿಷಯ ಕುರಿತು ಅವರು ಮಾತನಾಡಿದರು. 

ಬರೀ ರಾಜಕಾರಣಕ್ಕೂ ಮೌಲ್ಯಾಧಾರಿತ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ಹಣದ ಬಲ ಆಧಾರದ ಮೇಲಿನ ಸರಕಾರದಿಂದ  ದೇಶ ಉದ್ಧಾರ ಆಗಿಲ್ಲ. ಇದು ಜನ ಸಾಮಾನ್ಯರಿಗೂ ಗೊತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ, ಈ ಹಿಂದೆ ಸರಕಾರ ನಡೆಸಿದ್ದವರಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಬೇರೆ ಯಾರೂ ಮೌಲ್ಯಾಧಾರಿತ ರಾಜಕಾರಣ ಮಾಡಲಿಲ್ಲ, ಬೇರೆಯವರಿಂದ ದೇಶ ಉದ್ಧಾರವಾಗಿಲ್ಲ. ಆಸ್ತಿ ಮಾಡುವುದು, ರಾಜಕೀಯ

ಅಧಿಕಾರ ಮಾಡುವುದು ಆಸ್ತಿ ಅಲ್ಲ. ಆ ಶಕ್ತಿ ಸಮಾಜಕ್ಕಾಗಿ ಉಪಯೋಗಬೇಕು, ಅದು ಬಿಟ್ಟು ಮಕ್ಕಳು, ಮೊಮ್ಮಕ್ಕಳಿಗಾಗಿ ಆಸ್ತಿ ಮಾಡುವುದು ಮೌಲ್ಯಧಾರಿತವಲ್ಲ, ಈ ಕುರಿತು ಗಂಭೀರವಾಗಿ ಯೋಚನೆ ಮಾಡಬೇಕು. ಆದರೀಗ ಮೌಲ್ಯಧಾರಿತ ರಾಜಕಾರಣಕ್ಕೆ ಅವಕಾಶ ಸಿಕ್ಕಿದೆ.

ಪ್ರಧಾನಿ ನರೇಂದ್ರ ಮೋದಿ ಜೀ ಅವರು  ತಾಯಿ, ಅಣ್ಣ, ತಮ್ಮ, ತಂಗಿ ಇವರ್ಯ್ರನ್ನೂ ಹತ್ತಿರ ಸೇರಿಸಲಿಲ್ಲ. ದೇಶದ ಉದ್ಧಾರಕ್ಕಾಗಿ ಶ್ರಮಿಸುತ್ತಿದ್ದಾರೆ, ದೇಶ ಪ್ರಗತಿ ಸಾಧಿಸಿದೆ. ಸೋತು ಸುಮ್ಮನಾಗುವ ಬದಲು ಜೀವನದಲ್ಲಿ ಸವಾಲು ಸ್ವೀಕರಿಸಿ ಮುನ್ನಡೆಯಬೇಕು .ಆಗ  ಸಾಧನೆ ಸಾಧ್ಯಎಂದು ಹೇಳಿದರು. 

ರುದ್ರೇಗೌಡರು ರಾಜಕಾರಣಿಯಾಗಿ, ಕೈಗಾರಿಕೋದ್ಯಮಿಯಾಗಿ, ಸಮಾಜ ಸೇವಕರಾಗಿ  ನಿಷ್ಕಳಂಕ ವ್ಯಕ್ತಿ. ಜೀವನದಲ್ಲಿ ಉತ್ತಮ ಆದರ್ಶಗಳೊಂದಿಗೆ ಮುನ್ನಡೆದಿದ್ದಾರೆ. ಇಂತಹ ವಿಶೇಷ ವ್ಯಕ್ತಿಯನ್ನು ನಾಗರಿಕರು ಮುಂದೆ ತಂದು ಅಂತಹವರನ್ನು ಹೆಚ್ಚು ಸೃಷ್ಟಿ ಮಾಡಲು ಕಾರಣರಾಗಬೇಕು ಎಂದು ಹೇಳಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *