‘ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ : ಜೈ ಶ್ರೀರಾಮ್ ಎಂಬುದು ಬಿಜೆಪಿಯವರ ಸ್ವತ್ತಲ್ಲ’ – ಸಿಎಂ ಸಿದ್ದರಾಮಯ್ಯ

'Mahatma Gandhi Greatest Hindu: Jai Shriram is not BJP's property' - CM Siddaramaiah ‘ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ : ಜೈ ಶ್ರೀರಾಮ್ ಎಂಬುದು ಬಿಜೆಪಿಯವರ ಸ್ವತ್ತಲ್ಲ’ – ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜ. 30 : ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ. ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ  KPCC ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ  ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಗೋಡ್ಸೆ ಬಿಜೆಪಿಯವರ ಆರಾಧ್ಯ ದೈವ:

ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು.  ಗಾಂಧಿಜೀಯವರನ್ನು ಹತ್ಯೆಗೈದ ಗೋಡ್ಸೆ ಆರ್ ಎಸ್ ಎಸ್ ಸಂಘಟನೆ ಹಾಗೂ ಬಿಜೆಪಿಯವರ ಆರಾಧ್ಯ ದೈವ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ. ಮಹಾತ್ಮಾ ಗಾಂಧಿಜೀ ಒಬ್ಬ ಶ್ರೇಷ್ಠ ಹಿಂದೂ. ಅಂತಹ ಹಿಂದೂ ಭಕ್ತನನ್ನೇ ಗುಂಡಿಕ್ಕಿ ಕೊಂದವರೇ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ ಎಂದರು.

ಗಾಂಧೀಜಿಯವರನ್ನು ಮಾತ್ರ ಮಹಾತ್ಮ ಮತ್ತು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸಿದರು. ಗಾಂಧಿಜೀಯವರು ನುಡಿದಂತೆ ನಡೆಯುತ್ತಿದ್ದರು. ದೇಶ ವಿಭಜನೆಯಾದಾಗ ಸ್ವಾತಂತ್ರ್ಯವನ್ನು ಸಂಭ್ರಮಿಸದೇ ಹಿಂದೂ ಮುಸಲ್ಮಾನರ ನಡುವೆ ಸೌಹಾರ್ದತೆಯನ್ನು ಸ್ಥಾಪಿಸಲು ಗಾಂಧೀಜೀಯವರು ಶ್ರಮಿಸಿದರು ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುತ್ತದೆ

ದೇಶ ರಾಮರಾಜ್ಯವಾಗಬೇಕೆಂಬ ಚಿಂತನೆಯುಳ್ಳ ಗಾಂಧೀಜಿಯವರನ್ನು ಕೊಂದ ಗೋಡ್ಸೆಯನ್ನು ಬೆಂಬಲಿಸುವವರು ‘ತಾವು ಮಾತ್ರ ಹಿಂದೂಗಳು’ ಎಂದು ಪ್ರತಿಪಾದಿಸುತ್ತಿದ್ದಾರೆ. ಮನುಷ್ಯರ ನಡುವೆ ವೈಷಮ್ಯ ಬೆಳೆಸುವುದನ್ನು ಯಾವ ಧರ್ಮವೂ ಬೋಧಿಸುವುದಿಲ್ಲ. ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಒಳಿತನ್ನು ಬಯಸುವ ಹಾಗೂ ಸರ್ವ ಧರ್ಮಗಳನ್ನು ಗೌರವಿಸುವ ಪಕ್ಷ. ಮಹಾತ್ಮಾಗಾಂಧೀಜಿಯವರು ತೋರಿದ ಹಾದಿಯಲ್ಲಿ ನಡೆಯುವ ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ. ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು, ಮಾನವರಾಗಿ  ಸಾಮರಸ್ಯದಿಂದ ಬಾಳುವುದೇ ನಮ್ಮ ಮುಂದಿರುವ ಸವಾಲು ಎಂದರು.

ಶ್ರೀರಾಮನನ್ನು ರಾಜಕೀಯವಾಗಿ ಬಳಸುವ ಬಿಜೆಪಿ

ಬಿಜೆಪಿಯವರು ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಾರೆ. ರಾಮಭಕ್ತರಾಗಿದ್ದ ಗಾಂಧೀಜಿಯವರ ಹತ್ಯೆಗೈದ ಗೋಡ್ಸೆಯನ್ನು ಪಾಲಿಸುವವರನ್ನು ಜನರು ನಂಬುವುದಿಲ್ಲ. ಎಲ್ಲರನ್ನೂ ಸಮನಾಗಿ ಕಾಣುವ ರಾಮನ ಆದರ್ಶವನ್ನು ನಿಜಅರ್ಥದಲ್ಲಿ ಪಾಲಿಸುವ ನಾನು ಜನವರಿ 22 ರಂದು ನೂತನ ಶ್ರೀರಾಮ ಮಂದಿರವನ್ನು ಸ್ಥಳೀಯವಾಗಿ ಉದ್ಘಾಟಿಸಿದೆ. ‘ಜೈ ಶ್ರೀರಾಮ್ ’ ಎಂಬುದು ಬಿಜೆಪಿಯವರ ಸ್ವತ್ಥಲ್ಲ. ಮಹಾತ್ಮಾ ಗಾಂಧೀಜಿಯವರೇ ‘ಹೇ ರಾಮ್’ ಎಂದು ಹೇಳಿದ್ದರು.

ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ  ಗಾಂಧೀಜಿಯವರಿಗೆ ಸಲ್ಲಿಸುವ ಗೌರವ

ಬಿಜೆಪಿಯವರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಕೇವಲ ಬಾಯಿಮಾತಾಗಿದ್ದು, ಜಾತ್ಯಾತೀತತೆಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಆದರೆ ಈ ಮಾತಿಗೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ. ವಾಸ್ತವವಾಗಿ  ದೇಶದ ಐಕ್ಯತೆ, 143 ಕೋಟಿ ಜನ ಅನ್ಯೋನ್ಯವಾಗಿ ಸೌಹಾರ್ದಯುತವಾಗಿ ಬಾಳ ಬೇಕಾದರೆ ಯಾರನ್ನೂ ಕೂಡ ದ್ವೇಷಿಸಬಾರದು.

ದೇಶಭಕ್ತಿಯ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡುವ ಅಗತ್ಯವಿಲ್ಲ. ಬಿಜೆಪಿಯವರಿಗೆ ದೇಶದ ಇತಿಹಾಸವೇ ತಿಳಿದಿಲ್ಲ. ಅದಕ್ಕೆ ಅಂಬೇಡ್ಕರ್ ಅವರು ಯಾರಿಗೆ ಇತಿಹಾಸ ತಿಳಿದಿಲ್ಲವೋ ಅವರು ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ ಎಂದಿದ್ದು. ದೇಶದ ಆಡಳಿತದಿಂದ ಬಿಜೆಪಿಯನ್ನು ದೂರವಿಡುವುದೇ  ಗಾಂಧೀಜಿಯವರಿಗೆ ಸಲ್ಲಿಸುವ ಗೌರವ.  ಅವರು ಅಧಿಕಾರದಲ್ಲಿರಬಾರದು. ದೇಶದಲ್ಲಿ ಐಕ್ಯತೆ , ಶಾಂತಿಯಿಂದ ಇರಲು, ಎಲ್ಲರೂ ಮನುಷ್ಯರಾಗಿ ಬಾಳಬೇಕಾದರೆ ಜಾತ್ಯಾತೀತತೆಯಲ್ಲಿ ನಂಬಿಕೆ ಇರಬೇಕು.  ಗಾಂಧಿಯವರನ್ನು ಸ್ಮರಿಸಿ, ಅವರು  ನಡೆದ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ ಎಂದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *