‘0% ಅಭಿವೃದ್ಧಿ, 40% ಕಮಿಷನ್… ಉತ್ತರ ಕೊಡಿ ಸಿದ್ದರಾಮಯ್ಯ…’ ಎಂದ ಬಿಜೆಪಿ ಶಾಸಕ ಡಿ.ಎಸ್.ಅರುಣ್!

'0% development 40% commission... Answer Siddaramaiah...' said BJP MLA DS Arun! ‘0% ಅಭಿವೃದ್ಧಿ 40% ಕಮಿಷನ್… ಉತ್ತರ ಕೊಡಿ ಸಿದ್ದರಾಮಯ್ಯ…’ ಎಂದ ಬಿಜೆಪಿ ಶಾಸಕ ಡಿ.ಎಸ್.ಅರುಣ್!

ಶಿವಮೊಗ್ಗ, ಫೆ. 9: ‘ಕಾಂಗ್ರೆಸ್ ಸರ್ಕಾರದಲ್ಲಿ 40% ಕಮಿಷನ್ ದಂಧೆ ನಡೆಯುತ್ತಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ಆರೋಪದ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರು ಉತ್ತರ ನೀಡಬೇಕು’ ಎಂದು ವಿಧಾನ ಪರಿಷತ್ ಬಿಜೆಪಿ ಶಾಸಕ (council bjp mla) ಡಿ.ಎಸ್.ಅರುಣ್ (d s arun) ಆಗ್ರಹಿಸಿದ್ದಾರೆ.

ಈ ಕುರಿತಂತೆ ಅವರು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೆ ಸಾಗುತ್ತಿರುವ ಕಮಿಷನ್ ದಂಧೆ ಕುರಿತಂತೆ, ಗುತ್ತಿಗೆದಾರರ ಸಂಘದ ಅಧ್ಯಕ್ಷರ ಆರೋಪ ಪುಷ್ಠಿ ನೀಡಿದಂತಾಗಿದೆ. 40% ಕಮಿಷನ್ ನೀಡದಿದ್ದರೆ ಯಾವ ಕೆಲಸವೂ ಆಗುವುದಿಲ್ಲ ಎಂದು ಹೇಳಿರುವುದು, ಸರ್ಕಾರದ ಹಂತದಲ್ಲಿನ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಅಸಮರ್ಥ ಸೇವೆ ಹಾಗೂ ಆಡಳಿತ ಸುಧಾರಣೆಗಾಗಿ ಅಧಿಕಾರಿಗಳ ವರ್ಗಾವಣೆಗಳಾಗುತ್ತವೆ. ಆದರೆ ಕಾಂಗ್ರೆಸ್ ಸರ್ಕಾರದ ಅಲ್ಪಾವಧಿಯಲ್ಲಿ ಗರಿಷ್ಠ ವರ್ಗಾವಣೆಗಳು ನಡೆದಿವೆ. ಇದಕ್ಕೆ ಕಮೀಷನ್ ದಂಧೆ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

ಸಣ್ಣಪುಟ್ಟ ಸಮಸ್ಯೆಗಳ ಪರಿಹಾರಕ್ಕೆ, ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನ ವಿಧಾನಸೌಧಕ್ಕೆ ಜನಸಾಮಾನ್ಯರು ಬರುವಂತಾಗಿದೆ. ಅಧಿಕಾರಿಗಳನ್ನು ಮುಂದಿಟ್ಟುಕೊಂಡು ಕಮಿಷನ್ ವಸೂಲಿ ಮಾಡುತ್ತಿರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ.

ಈ ಕಾರಣದಿಂದ ರಾಜ್ಯದ ಮೂಲೆಮೂಲೆಯಿಂದ ಜನರು ಬಾಕಿಯಿರುವ ಕೆಲಸಕಾರ್ಯ ಮಾಡಿಸಿಕೊಳ್ಳಲು ಮುಖ್ಯಮಂತ್ರಿಗಳ ಜನಸ್ಪಂದನ ಸಭೆಗೆ ಆಗಮಿಸುವಂತಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ದಿ ಶೂನ್ಯವಾಗಿದ್ದು, ಕಮೀಷನ್ ದಂಧೆ ಜೋರಾಗಿದೆ ಎಂದು ಡಿ.ಎಸ್.ಅರುಣ್ ಅವರು ದೂರಿದ್ಧಾರೆ.

 ‘

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →