ಗ್ಯಾರಂಟಿ ಯೋಜನೆಗಳಂತೆ ಕೃಷಿಯಲ್ಲೂ ಕಾರ್ಯಕ್ರಮಗಳ ಘೋಷಣೆಗೆ ರೈತ ಮುಖಂಡರ ಆಗ್ರಹ

Farmer leaders demand the state government to announce programs in agriculture like guarantee schemes ಗ್ಯಾರಂಟಿ ಯೋಜನೆಗಳಂತೆ ಕೃಷಿಯಲ್ಲೂ ಕಾರ್ಯಕ್ರಮಗಳ ಘೋಷಣೆಗೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡರ ಆಗ್ರಹ

ಬೆಂಗಳೂರು, ಫೆ. 11: ಗ್ಯಾರಂಟಿ ಯೋಜನೆಗಳ ಯಶಸ್ವಿಯಾಗಿ ಜಾರಿಗೊಳಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ರೈತ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

ಭಾನುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಜೆಟ್ ಪೂರ್ವ ರೈತ ಮುಖಂಡರು ಮತ್ತು ರೈತ ಹೋರಾಟಗಾರರ ಸಭೆಯಲ್ಲಿ, ತಮ್ಮ ಬೇಡಿಕೆಗಳನ್ನು ಮಂಡಿಸುವ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿಯ ಬಗ್ಗೆ ಮೆಚ್ಚುಗೆ ಸೂಚಿಸಿ ಸಿಎಂಗೆ ಅಭಿನಂದಿಸಿದರು. 

ರೈತ ಮಹಿಳೆಯರ ಮತ್ತು ರೈತ ಕುಟುಂಬಗಳ ಆರ್ಥಿಕ ಶಕ್ತಿ-ಚೈತನ್ಯವನ್ನು ಗ್ಯಾರಂಟಿ ಯೋಜನೆಗಳು ಹೆಚ್ಚಿಸಿರುವುದನ್ನು ವಿವರಿಸಿದ ಬಡಗಲಾಪುರ ನಾಗೇಂದ್ರ ಅವರು, ರೈತರ ಮತ್ತು ಜನ ಸಮುದಾಯದ ಪೌಷ್ಠಿಕತೆ ಹೆಚ್ಚಿಸುವ ದಿಕ್ಕಿನಲ್ಲಿ ಸಲಹೆ ನೀಡಿದರು. ಅವರ ಸಲಹೆಯನ್ನು ಗಂಭೀರವಾಗಿ ತೆಗೆದುಕೊಂಡಿರುವುದಾಗಿ ತಿಳಿಸಿದ ಸಿಎಂ, ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.

ಬಹಳ ಕಷ್ಟ ಪಟ್ಟು ಗ್ಯಾರಂಟಿ ಯೋಜನೆಗಳನ್ನು ಇಷ್ಟು ಶೀಘ್ರವಾಗಿ ಜಾರಿ ಮಾಡಿದ್ದೀರಿ. ಇದರ ಅನುಕೂಲ ರಾಜ್ಯದ ಜನರಿಗೆ ಆಗುತ್ತಿರುವ ಹೊತ್ತಲ್ಲಿ ಟೀಕೆಗಳಿಗೆ ಅಂಜುವ ಅಗತ್ಯವಿಲ್ಲ ಎನ್ನುವ ಅಭಿಪ್ರಾಯಗಳು ರೈತ ಪ್ರತಿನಿಧಿಗಳಿಂದ ವ್ಯಕ್ತವಾಯಿತು. 

ಇವೆಲ್ಲದರ ಜತೆಗೆ ಕೃಷಿ ಇಲಾಖೆ ಅಧಿಕಾರಿಗಳು ಬೀಜ, ಗೊಬ್ಬರ ವಿತರಿಸುವುದಕ್ಕೆ ಮಾತ್ರ ಸೀಮಿತ ಆಗದೆ ಇವತ್ತಿನ ಕೃಷಿ ಬೇಡಿಕೆಗಳಿಗೆ ತಕ್ಕಂತೆ ಅಪ್ ಡೇಟ್ ಆಗಬೇಕು, ಕೆರೆಗಳ ಅಭಿವೃದ್ಧಿ, ಮಂಡ್ಯ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರ ಹಣ ಸಹಾಯ ಕೊಟ್ಟಿರುವುದು ಸ್ವಾಗತಿಸಿ ಕಾರ್ಖಾನೆಯನ್ನು ಸರ್ಕಾರವೇ ನಡೆಸಲು ಮುಂದಾಗಬೇಕು,

ರೈತ ಯುವಕ-ಯುವತಿಯರಿಗೆ ಭರವಸೆ ಹುಟ್ಟಿಸುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಬೇಕು, ಕೃಷಿಯಲ್ಲಿ ರಾಜ್ಯ ಮಾದರಿ ಆಗುವ ಕಾರ್ಯಕ್ರಮ ರೂಪಿಸಿ ಎನ್ನುವುದೂ ಸೇರಿದಂತೆ ನೂರಕ್ಕೂ ಅಧಿಕ ಬೇಡಿಕೆಗಳನ್ನು ರೈತ ಮುಖಂಡರು ಮುಖ್ಯಮಂತ್ರಿಗಳ ಎದುರು ಮಂಡಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *