ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ!

ಶಿವಮೊಗ್ಗ, ಫೆ. 20: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಹಾಗೂ ಹೊಸ ರಾಜಕೀಯ ಬದಲಾವಣೆಗೆ ಕೈ ಜೋಡಿಸುವಂತೆ ನಾಗರೀಕರಿಗೆ ಕರೆ ನೀಡಿ ಸೋಮವಾರ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷ ಪೊರಕೆಯೇ ಪರಿಹಾರ ಅಭಿಯಾನ ಹಮ್ಮಿಕೊಂಡಿತ್ತು.
ಇದರ ಅಂಗವಾಗಿ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ಕಸ ಗುಡಿಸುವ ಕಾರ್ಯಕ್ರಮವನ್ನು ಎಎಪಿ ಹಮ್ಮಿಕೊಂಡಿತ್ತು. 
ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಪೊರಕೆ ಹಿಡಿದು ಮೆರವಣಿಗೆ ನಡೆಸಿದರು. ಅಭಿಯಾನದ ನೇತೃತ್ವವನ್ನ ಎಎಪಿ ಪಕ್ಷದ ನಾಯಕಿ ನೇತ್ರಾವತಿ ವಹಿಸಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರಾದ ಸುರೇಶ್ ಕೌಟೇಕರ್, ನಜೀರ್ ಅಹ್ಮದ್, ಮಕ್ಬುಲ್ ಅಹಮದ್, ಕಲಂದರ್,  ಬೊಮ್ಮನಕಟ್ಟೆ ಮಾಲತೇಶ್, ರಾಮಕೃಷ್ಣ,
ಶ್ರೀನಿವಾಸ್, ಹರೀಶ್, ರಮೇಶ್, ಶಿವಕುಮಾರ್, ಪುಷ್ಪಲತಾ, ಶೋಭಾ, ಶ್ವೇತಾ, ಮರಿಯಪ್ಪ, ಸೋಮಶೇಖರ್, ಹಾಲಪ್ಪ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →