ಶಿವಮೊಗ್ಗದಲ್ಲಿ ಪತ್ನಿ ಪರ ಪ್ರಚಾರ : ನಟ ಶಿವರಾಜಕುಮಾರ್ ಸಿನಿಮಾ, ಜಾಹೀರಾತುಗಳ ನಿರ್ಬಂಧಕ್ಕೆ ಆಗ್ರಹ

Pro-wife campaign in Shimoga: Actor Sivarajkumar demands ban on movie, advertisements ಶಿವಮೊಗ್ಗದಲ್ಲಿ ಪತ್ನಿ ಪರ ಪ್ರಚಾರ : ನಟ ಶಿವರಾಜಕುಮಾರ್ ಸಿನಿಮಾ, ಜಾಹೀರಾತುಗಳ ಪ್ರದರ್ಶನ ನಿರ್ಬಂಧಕ್ಕೆ ಆಗ್ರಹ

ಶಿವಮೊಗ್ಗ / ಬೆಂಗಳೂರು, ಮಾ. 23: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (shimoga loksabha constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪತ್ನಿ ಗೀತಾ ಶಿವರಾಜಕುಮಾರ್ (geetha shivarajkumar) ಅವರ ಪರವಾಗಿ, ಇತ್ತೀಚೆಗೆ ಚಿತ್ರನಟ ಶಿವರಾಜಕುಮಾರ್ (actor shivarajkumar) ಅವರು ಬಿರುಸಿನ ಪ್ರಚಾರ ನಡೆಸಿದ್ದರು.

ಈ ನಡುವೆ ಅವರು ನಟಿಸಿರುವ ಸಿನಿಮಾ (cinema), ಜಾಹೀರಾತು, ಟಿವಿ ಶೋಗಳ ಪ್ರದರ್ಶನಕ್ಕೆ ಚುನಾವಣೆ (election) ಪೂರ್ಣಗೊಳ್ಳುವವರೆಗೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿ, ಶುಕ್ರವಾರ ಬಿಜೆಪಿ (bjp) ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾ ಸಂಘಟನೆ ರಾಜ್ಯಾಧ್ಯಕ್ಷ ರಘು ಎಂಬುವರು ಬೆಂಗಳೂರಿನಲ್ಲಿ (bengaluru) ಮುಖ್ಯ ಚುನಾವಣಾ ಆಯುಕ್ತರ ಕಚೇರಿ (election commission) ಯಲ್ಲಿ ದೂರು ಸಲ್ಲಿಸಿದ್ದಾರೆ.

ನಟ ಶಿವರಾಜಕುಮಾರ್ ಅವರು ಕಾಂಗ್ರೆಸ್ (congress) ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಅವರು ಖ್ಯಾತ ನಟರಾಗಿದ್ದು, ಚುನಾವಣೆ ಹಾಗೂ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ಹಾಗೂ ಮಾದರಿ ನೀತಿ ಸಂಹಿತೆ ಪಾಲನೆಯಾಗಬೇಕಾಗಿದೆ.

ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾಗಿದೆ. ಸಿನಿಮಾ ಮಂದಿರಗಳು, ಟಿವಿ ವಾಹಿನಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಿನಿಮಾ ಹಾಗೂ ಜಾಹೀರಾತುಗಳ ಪ್ರದರ್ಶನಕ್ಕೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದ್ದಾರೆ.

ನಿರ್ಬಂಧ ಸಾಧ್ಯತೆ? : ಶಿವರಾಜಕುಮಾರ್ ಅವರು ಪತ್ನಿ ಪರ ಶಿವಮೊಗ್ಗ (shivamogga) ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಈ ಕಾರಣದಿಂದ ಮಾದರಿ ನೀತಿ-ಸಂಹಿತೆ ಪೂರ್ಣಗೊಳ್ಳುವವರೆಗೂ ಅವರು ಅಭಿನಯಿಸಿದ ಸಿನಿಮಾ, ಜಾಹೀರಾತುಗಳ ಪ್ರದರ್ಶನಕ್ಕೆ ನಿರ್ಬಂಧ ಬೀಳುವ ಸಾಧ್ಯತೆಗಳು ಕಂಡುಬರುತ್ತಿವೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *