ಬಿಸಿಲ ತಾಪಕ್ಕೆ ಬರಿದಾಗುತ್ತಿರುವ ಬೋರ್’ವೆಲ್, ಬಾವಿಗಳು : ಟ್ಯಾಂಕರ್ ಮೂಲಕ ನೀರು ಪೂರೈಕೆ!

In Shimoga taluk the ground water is falling to the sun - draining bore wells wells! Reporter : b. renukesha ಬಿಸಿಲ ಧಗೆಗೆ ಕುಸಿಯುತ್ತಿರುವ ಅಂತರ್ಜಲ – ಬರಿದಾಗುತ್ತಿರುವ ಬೋರ್’ವೆಲ್, ಬಾವಿಗಳು : ಟ್ಯಾಂಕರ್ ಮೂಲಕ ನೀರು ಪೂರೈಕೆ! ವರದಿ : ಬಿ. ರೇಣುಕೇಶ್,

ಶಿವಮೊಗ್ಗ, ಮಾ. 27: ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಅಂತರ್ಜಲ (ground water) ಮಟ್ಟ ಗಂಭೀರ ಸ್ವರೂಪದಲ್ಲಿ ಕುಸಿಯಲಾರಂಭಿಸಿದೆ. ಬೋರ್’ವೆಲ್ (borewells), ಬಾವಿಗಳು (wells) ನೀರಿಲ್ಲದೆ ಬರಿದಾಗಲಾರಂಭಿಸಿ!

ಶಿವಮೊಗ್ಗ (shivamogga) ನಗರದ ಹೊರವಲಯ ಹಾಗೂ ತಾಲೂಕಿನ ಹಲವು ಗ್ರಾಮಗಳಲ್ಲಿ, ಜಲಮೂಲಗಳು (water bodies) ಒಣಗಿ ಹೋಗಿವೆ. ಇದರಿಂದ ಕುಡಿಯುವ ನೀರು (drinking water) ಪೂರೈಕೆಯ ಮೇಲೆ ತೀವ್ರ ಸ್ವರೂಪದ ಪರಿಣಾಮ ಬೀರುವಂತಾಗಿದೆ.

ಅಬ್ಬಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಣಸೋಡು, ಬಸವನಗಂಗೂರು ಗ್ರಾಮ ವ್ಯಾಪ್ತಿ ಸೇರಿದಂತೆ ಹಲವೆಡೆ ನೀರು ಪೂರೈಕೆಯ ಬೋರ್ ವೆಲ್ ಗಳು ನೀರಲ್ಲದೆ ಬರಿದಾಗಿವೆ. ಅಂತರ್ಜಲ ಮಟ್ಟ ಕಡಿಮೆಯಾಗಿ, ಮೋಟಾರ್ ಗಳು ಸುಟ್ಟು ಹೋಗುತ್ತಿವೆ.

ಈ ಕಾರಣದಿಂದ ಗ್ರಾಮ ಪಂಚಾಯ್ತಿ ಆಡಳಿತವು ಹಗಲಿರುಳು ಸಮಸ್ಯೆ ಪರಿಹಾರಕ್ಕೆ ಶ್ರಮಿಸುವಂತಾಗಿದೆ. ಕೆಲವೆಡೆ ಗ್ರಾಮಸ್ಥರಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಯ ವ್ಯವಸ್ಥೆ ಮಾಡಲಾರಂಭಿಸಿದೆ.

ಜಾನುವಾರುಗಳ ಸಂಕಷ್ಟ : ಶಿವಮೊಗ್ಗ ತಾಲೂಕಿನ ಸೋಮಿನಕೊಪ್ಪ, ಮೋಜಪ್ಪನ ಹೊಸೂರು, ಬಸವನಗಂಗೂರು, ಕೋಟೆಗಂಗೂರು, ಗೆಜ್ಜೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ ಬಹುತೇಕ ಕೆರೆಕಟ್ಟೆಗಳು ನೀರಿಲ್ಲದೆ ಬರಿದಾಗಿವೆ.

ಇದರಿಂದ ಜಾನುವಾರುಗಳು (cattels) ಕುಡಿಯುವ ನೀರಿಗೆ ಒಂದೆಡೆಯಿಂದ ಮತ್ತೊಂದೆಡೆ ಅಲೆದಾಡುವಂತಾಗಿದೆ. ಹಾಗೆಯೇ ಬಿಸಿಲ ತಾಪಕ್ಕೆ (temperature) ಹಸಿರು ಹುಲ್ಲು ಸಂಪೂರ್ಣ ಒಣಗಿ ಹೋಗಿದೆ. ಮೇವು – ನೀರಿಲ್ಲದೆ (fodder – water) ಜಾನುವಾರುಗಳು ಪರದಾಡುವಂತಾಗಿದ್ದು, ಹಸಿವು ಇಂಗಿಸಿಕೊಳ್ಳಲು ಸಿಕ್ಕಸಿಕ್ಕ ವಸ್ತುಗಳನ್ನು ತಿನ್ನುತ್ತಿರುವ ದಾರುಣ ಸ್ಥಿತಿ ಕಂಡುಬರುತ್ತಿದೆ.

ಅತ್ಯದಿಕ : ಪ್ರಸ್ತುತ ವರ್ಷ ಮುಂಗಾರು ಮಳೆ (monsoon) ಕೈಕೊಟ್ಟಿತ್ತು. ಈ ನಡುವೆ ಇತ್ತೀಚಿನ ವರ್ಷಗಳಲ್ಲಿ ಹಿಂದೆಂದೂ ಕಂಡರೀಯದ ತಾಪಮಾನ ಕಂಡುಬರುತ್ತಿದೆ. ಇದರಿಂದ ಜನಜೀವನ ತತ್ತರಿಸುವಂತಾಗಿದೆ.

ಇದರ ಜೊತೆಗೆ ಬೇಸಿಗೆ (summer) ವೇಳೆ ಬೀಳುತ್ತಿದ್ದ ಮಳೆಯೂ ಕೂಡ ಕಣ್ಮರೆಯಾಗಿದೆ. ಇದರಿಂದ ಬರದ ತೀವ್ರತೆ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಏಪ್ರಿಲ್ – ಮೇ ತಿಂಗಳುಗಳು ಮತ್ತಷ್ಟು ಸಂಕಷ್ಟ ತಂದೊಡ್ಡುವುದು ನಿಶ್ಚಿತವಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *