ಲೋಕಸಭೆ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಸಿಕೊಂಡರೆ ಬೀಳಲಿದೆ ಕೇಸ್!

A case will fall if children are used for Lok Sabha election campaign! ಲೋಕಸಭೆ ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಸಿಕೊಂಡರೆ ಬೀಳಲಿದೆ ಕೇಸ್!

ಶಿವಮೊಗ್ಗ, ಏ. 2 : ಲೋಕಸಭಾ ಚುನಾವಣೆ (loksabha election) ಪ್ರಚಾರ ಹಾಗೂ ಇತರೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ, ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ (prohibited) ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು (shimoga dc) ತಿಳಿಸಿದ್ದಾರೆ.

ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ.

ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ರಾಜಕೀಯ ಪಕ್ಷದ (political parties) ಅಭ್ಯರ್ಥಿಗಳು/ಸ್ವತಂತ್ರ ಅಭ್ಯರ್ಥಿಗಳು/ಪಕ್ಷದ ಕಾರ್ಯಕರ್ತರುಗಳು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಹಾಗೂ ರಾಜಕೀಯ ಪಕ್ಷದ ಕುರಿತು ಮತ ನೀಡುವಂತೆ ಕೋರುವುದನ್ನು, ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಯಾವುದೇ ರೀತಿಯಲ್ಲಿ ಬಳಸಿಕೊಳ್ಳದಂತೆ ನಿಷೇಧಿಸಿದೆ. ಒಂದು ವೇಳೆ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದಲ್ಲಿ ಅಂತವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ (National Commission for Child Rights) ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ. ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *