ಭೀಕರ ರಸ್ತೆ ಅಪಘಾತ : ಕಾರಿನಲ್ಲಿದ್ದ ಮೂವರು ಸಾವು – ನಾಲ್ವರಿಗೆ ಗಾಯ!

Terrible road accident near Chinnikatte near Savalanga Nyamati taluk :Three people in the car died - many injured! ನ್ಯಾಮತಿ ತಾಲೂಕು ಸವಳಂಗ ಸಮೀಪದ ಚಿನ್ನಿಕಟ್ಟೆ ಬಳಿ ಭೀಕರ ರಸ್ತೆ ಅಪಘಾತ : ಕಾರಿನಲ್ಲಿದ್ದ ಮೂವರು ಸಾವು – ಹಲವರಿಗೆ ಗಾಯ!

ನ್ಯಾಮತಿ (nyamathi), ಏ. 11: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ (accident) ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನ್ಯಾಮತಿ ತಾಲೂಕು ಸವಳಂಗ (savalanga) ಸಮೀಪದ ಚಿನ್ನಿಕಟ್ಟೆ – ಬಿದರಹಳ್ಳಿ ಮಾರ್ಗದಲ್ಲಿ ನಡೆದಿದೆ.

ಶಿವಮೊಗ್ಗ (shivamogga) ತಾಲೂಕಿನ ಹರಮಘಟ್ಟದ ನಂಜುಂಡಪ್ಪ (83), ರಾಕೇಶ್ (27) ಹಾಗೂ ಹೊನ್ನಾಳ್ಳಿ ತಾಲೂಕಿನ ಸೂರಗೊಂಡನಕೊಪ್ಪದ (surgundanakoppa) ನಿವಾಸಿ ದೇವರಾಜ್ (30) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ (car) ನಾಲ್ವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ( www.udayasaakshi.com )

ಓಮ್ನಿ ಕಾರಿನಲ್ಲಿ (omni car) 7 ಜನರು ಪ್ರಯಾಣಿಸುತ್ತಿದ್ದು, ಶಿವಮೊಗ್ಗದೆಡೆಯಿಂದ ಸೂರಗೊಂಡನಕೊಪ್ಪಕ್ಕೆ ತೆರಳುತ್ತಿತ್ತು. ಹಾಗೂ ಹಾನಗಲ್ (hangal) ಕಡೆಯಿಂದ ಶಿವಮೊಗ್ಗದೆಡೆಗೆ ಕೆ.ಎಸ್.ಆರ್.ಟಿ.ಸಿ (ksrtc bus) ಬಸ್ ಆಗಮಿಸುತ್ತಿತ್ತು ಎಂದು ಹೇಳಲಾಗಿದೆ.

ಅಪಘಾತದ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಜೊತೆಗೆ ಬಸ್ ಕೂಡ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ, ಟೈರ್ ವೊಂದು ಕಳಚಿ ಬಿದ್ದಿದೆ. ಸ್ಥಳೀಯ ನಿವಾಸಿಗಳು ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ.

ಘಟನಾ ಸ್ಥಳಕ್ಕೆ ಎಎಸ್ಪಿ (asp) ಮಂಜುನಾಥ್, ಡಿವೈಎಸ್ಪಿ (dysp) ಪ್ರಶಾಂತ್ ಮುನ್ನೊಳಿ, ನ್ಯಾಮತಿ ಪೊಲೀಸ್ ಠಾಣೆ (nyamathi police station) ಇನ್ಸ್’ಪೆಕ್ಟರ್ ರವಿ ಎನ್. ಎಸ್. ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ. ( www.udayasaakshi.com )

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *