ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರ ರೈಡ್!

Police raid on houses of rowdies across Shimoga district! ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರ ರೈಡ್!

ಶಿವಮೊಗ್ಗ (shivamogga), ಏ. 13: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ (shimoga district) ವಿವಿಧೆಡೆ ರೌಡಿ ಶೀಟರ್ (rowdy sheeters) ಮನೆಗಳ ಮೇಲೆ ಪೊಲೀಸರು (police) ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ ಘಟನೆ, ಶನಿವಾರ ಮುಂಜಾನೆ ನಡೆದಿದೆ.

‘ಲೋಕಸಭೆ ಚುನಾವಣೆ (loksabha election) ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ರೌಡಿ ಶೀಟರ್ ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ. ಈ ವೇಳೆ ಅವರು ಮಾಡುತ್ತಿರುವ ಕೆಲಸ, ( www.udayasaakshi.com )

ಮನೆಯಲ್ಲಿ ಮಾದಕ ಹಾಗೂ ಮಾರಕಾಸ್ತ್ರಗಳನ್ನಿಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಲಾಯಿತು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿ ಭಂಗವನ್ನುಂಟು ಮಾಡದಂತಹ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ’ ಎಂದು ಪೊಲೀಸ್ ಇಲಾಖೆಯು (shimoga police dept) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

‘ಜಿಲ್ಲಾ ರಕ್ಷಣಾಧಿಕಾರಿ (sp) ಜಿ.ಕೆ.ಮಿಥುನ್ ಕುಮಾರ್ ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಹಾಗೂ ಬಿ ಉಪ ವಿಭಾಗಗಳ ಡಿವೈಎಸ್ಪಿಗಳಾದ (dysp) ಬಾಬು ಅಂಜನಪ್ಪ, ಸುರೇಶ್ ಎಂ, ಭದ್ರಾವತಿ (bhadravathi) ಉಪ ವಿಭಾಗ ಡಿವೈಎಸ್ಪಿ ನಾಗರಾಜ್, ಸಾಗರ (sagara) ಉಪ ವಿಭಾಗ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣನಾಯ್ಕ್, ( www.udayasaakshi.com )

ಶಿಕಾರಿಪುರ (shikaripura) ಉಪ ವಿಭಾಗ ಡಿವೈಎಸ್ಪಿ ಕೇಶವ್, ತೀರ್ಥಹಳ್ಳಿ (thirthahalli) ಉಪ ವಿಭಾಗ ಡಿವೈಎಸ್ಪಿ ಗಜಾನನ ವಾಮನ ಸುತಾರ ಸೇರಿದಂತೆ ಆಯಾ ಠಾಣೆಗಳ ಇನ್ಸ್’ಪೆಕ್ಟರ್, ಸಬ್ ಇನ್ಸ್’ಪೆಕ್ಟರ್ ಗಳು ದಾಳಿಯಲ್ಲಿ ಭಾಗಿಯಾಗಿದ್ದರು.

ಪ್ರತ್ಯೇಕ ತಂಡಗಳ ರಚನೆ ಮಾಡಿಕೊಂಡು ಏಕಕಾಲದಲ್ಲಿಯೇ ರೌಡಿ ಶೀಟರ್ ಗಳ (rowdy’s) ಮನೆಗಳ ಮೇಲೆ ದಾಳಿ (raid) ನಡೆಸಿ ತಪಾಸಣೆ ನಡೆಸಿ ಪರಿಶೀಲನೆ ನಡೆಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ( www.udayasaakshi.com )

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →