ಹೊನ್ನಾಳಿ ಬಳಿ ಭೀಕರ ರಸ್ತೆ ಅಪಘಾತ : ಶಿವಮೊಗ್ಗದ ಇಬ್ಬರು ಸಾವು – 6 ಜನರಿಗೆ ಗಾಯ

Horrible road accident near Honnalli: Two dead from Shimoga 3 injured ಹೊನ್ನಾಳಿ ಬಳಿ ಭೀಕರ ರಸ್ತೆ ಅಪಘಾತ : ಶಿವಮೊಗ್ಗದ ಇಬ್ಬರು ಸಾವು – 6 ಜನರಿಗೆ ಗಾಯ

ಹೊನ್ನಾಳಿ / ಶಿವಮೊಗ್ಗ, ಏ. 4: ರಸ್ತೆ ಬದಿಯ ಆಲದ ಮರಕ್ಕೆ ಕಾರೊಂದು (car) ಡಿಕ್ಕಿ (accident) ಹೊಡೆದ ಪರಿಣಾಮ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟು (spot death) 6 ಜನರು ಗಾಯಗೊಂಡಿರುವ (injured) ಘಟನೆ ಹೊನ್ನಾಳಿ ತಾಲೂಕು (honnali) ಅರಕೆರೆಯ ಎ.ಕೆ.ಕಾಲೋನಿ ಸಮೀಪ ಶುಕ್ರವಾರ ಸಂಜೆ ನಡೆದಿದೆ. ( www.udayasaakshi.com )

ಖಾಸಗಿ ಎಲೆಕ್ಟ್ರಿಕಲ್ ಕಂಪೆನಿಯೊಂದರ ಉದ್ಯೋಗಿ, ಶಿವಮೊಗ್ಗದ (shivamogga) ಗಾಂಧಿ ನಗರದ ನಿವಾಸಿ ವೇದಮೂರ್ತಿ (60) ಹಾಗೂ ಅವರ ತಾಯಿ ಶಾರದಮ್ಮ (75) ಮೃತಪಟ್ಟವರೆಂದು ಗುರುತಿಸಲಾಗಿದೆ. ಕುಟುಂಬದ ಇತರೆ 6 ಸದಸ್ಯರು ಗಾಯಗೊಂಡಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ( www.udayasaakshi.com )

ದಾವಣಗೆರೆಯಲ್ಲಿ (davanagere) ಆಯೋಜಿತವಾಗಿದ್ದ ಸಂಬಂಧಿಯೋರ್ವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಹೊನ್ನಾಳಿ ಪೊಲೀಸರು (honnali police station) ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಅವಘಡದ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *