ಲಾಡ್ಜ್ – ರೆಸಾರ್ಟ್ ಗಳಿಗೆ ಪೊಲೀಸರ ದಿಢೀರ್ ಭೇಟಿ : ಪರಿಶೀಲನೆ!

ಶಿಕಾರಿಪುರ, ಫೆ. 24: ಶಿಕಾರಿಪುರ ಪಟ್ಟಣದ ಲಾಡ್ಜ್ ಹಾಗೂ ರೆಸಾರ್ಟ್ ಗಳಿಗೆ ಪೊಲೀಸರು ದಿಢೀರ್ ಭೇಟಿ ನೀಡಿ, ಗ್ರಾಹಕರ ವಿವರ ಪರಿಶೀಲನೆ ನಡೆಸಿದ ಘಟನೆ ಗುರುವಾರ ನಡೆದಿದೆ. 
ಲಾಡ್ಜ್ ಗೆ ಆಗಮಿಸುವ ಗ್ರಾಹಕರ ವಿವರಗಳನ್ನು ರಿಜಸ್ಟರ್ ಪುಸ್ತಕದಲ್ಲಿ ನಮೂದಿಸಲಾಗಿದೆಯೇ, ಗ್ರಾಹಕರಿಂದ ಪಡೆದುಕೊಂಡಿರುವ ದಾಖಲಾತಿಗಳ ವಿವರ, ಸಿಸಿ ಕ್ಯಾಮರಾಗಳ ಕಾರ್ಯನಿರ್ವಹಣೆ ಮತ್ತೀತರ ವಿವರಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
ಶಿಕಾರಿಪುರ ಟೌನ್ ಠಾಣೆ ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ ಎಸ್ ಕೊಪ್ಪಲೂರು ನೇತೃತ್ವದಲ್ಲಿ ಈ ತಪಾಸಣಾ ಕಾರ್ಯ ನಡೆದಿದೆ. ಗ್ರಾಹಕರಿಗೆ ಕೊಠಡಿ ನೀಡುವ ವೇಳೆ ಅನುಸರಿಸಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಲಾಡ್ಜ್ – ರೆಸಾರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →