ಶಿವಮೊಗ್ಗ ಪೊಲೀಸರ ದೇಹದ ತೂಕ ಇಳಿಸಲು ವಿಶೇಷ ಶಿಬಿರ!

Shimoga police special camp to lose weight! ಶಿವಮೊಗ್ಗ ಪೊಲೀಸರ ದೇಹದ ತೂಕ ಇಳಿಸಲು ವಿಶೇಷ ಶಿಬಿರ! ವರದಿ : ಬಿ. ರೇಣುಕೇಶ್ / reporter - b.renukesha

ಶಿವಮೊಗ್ಗ (shivamogga), ಮೇ 26: ದೇಹದ ತೂಕ ಹೆಚ್ಚಿರುವ ಸ್ಥೂಲಕಾಯ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳನ್ನು, ‘ಸ್ಲಿಮ್’ (slim) ಮಾಡುವ ಕಾರ್ಯಕ್ಕೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ (shimoga district police dept) ಮುಂದಾಗಿದೆ! ಇದಕ್ಕಾಗಿ ವಿಶೇಷ ವ್ಯಾಯಾಮ ಹಾಗೂ ಯೋಗಾಸನ ಶಿಬಿರ ಹಮ್ಮಿಕೊಂಡಿದೆ.

ಹೌದು. ಹೆಚ್ಚಿನ ದೇಹ ತೂಕ (body weight) ಹೊಂದಿರುವ ಪೊಲೀಸರ ತೂಕ ಕಡಿಮೆಗೊಳಿಸಿ, ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ಸುಸ್ಥಿತಿ ತರಲು ಜಿಲ್ಲಾ ಪೊಲೀಸ್ ಇಲಾಖೆ ಮುಂದಾಗಿದೆ. ಪೊಲೀಸರು (police) ದೈಹಿಕವಾಗಿ ಸಶಕ್ತರಾಗಿರಬೇಕು. ಫಿಟ್ನೆಸ್ (fitness) ವಿಷಯದಲ್ಲಿ ಇತರರಿಗೆ ಮಾದರಿಯಾಗಿರಬೇಕು ಎಂಬ ಕಾರಣದಿಂದ, ‘ಆರೋಗ್ಯಕರ ಸಮಾಜಕ್ಕಾಗಿ ಆರೋಗ್ಯಕರ ಪೊಲೀಸ್’ ಎಂಬ ಧ್ಯೇಯ ಘೋಷದೊಂದಿಗೆ ವಿಶೇಷ ಶಿಬಿರವನ್ನು ಹಮ್ಮಿಕೊಂಡಿದೆ.

ವ್ಯಕ್ತಿಯ ಎತ್ತರ, ವಯಸ್ಸಿಗೆ ಅನುಗುಣವಾಗಿ ಇಂತಿಷ್ಟು ದೇಹದ ತೂಕ ಹೊಂದಿರಬೇಕು. ಬಿಎಂಐ / BMI (ಬಾಡಿ ಮಾಸ್ ಇಂಡೆಕ್ಸ್) ಮಾನದಂಡಕ್ಕಿಂತ ಹೆಚ್ಚಿನ ತೂಕ ಹೊಂದಿರುವ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಣೆ ಮಾಡುತ್ತಿರುವ 167 ಪೊಲೀಸ್ ಅಧಿಕಾರಿ – ಸಿಬ್ಬಂದಿಗಳನ್ನು ಗುರುತಿಸಲಾಗಿದೆ.

ಇವರ ಬೊಜ್ಜು (obesity) ಕರಗಿಸಿ, ದೈಹಿಕವಾಗಿ ಸದೃಢಗೊಳಿಸಲು (Physical fitness) 21 ದಿನಗಳ ಕಾಲ ವಿಶೇಷ ವ್ಯಾಯಾಮ – ಯೋಗಾಸನ ಶಿಬಿರ ಆಯೋಜಿಸಲಾಗಿದೆ. ಭಾನುವಾರ ಶಿವಮೊಗ್ಗದ (shimoga) ಡಿಎಆರ್ ಮೈದಾನದಲ್ಲಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (sp mithun kumar) ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಶಿಬಿರದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಮಾನಸಿಕ ಒತ್ತಡ ನಿರ್ವಹಣೆ, ಉತ್ತಮ ಆರೋಗ್ಯಕ್ಕಾಗಿ ಪಾಲನೆ ಮಾಡಬೇಕಾದ ಆಹಾರದ ಕ್ರಮಗಳು, ದೈಹಿಕ ಸದೃಢತೆಗಾಗಿ ವ್ಯಾಯಾಮ – ಯೋಗಾಸನಗಳ ಬಗ್ಗೆ ತಜ್ಞರಿಂದ ತರಬೇತಿ – ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಮಾರಂಭದಲ್ಲಿ ಯೋಗ ವಿಸ್ಮಯ ಟ್ರಸ್ಟ್ ನ ಅನಂತ್ ಗುರೂಜಿ, ಹೆಚ್ಚುವರಿ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಕಾರ್ಯಪ್ಪ ಎ ಜಿ, ಡಿವೈಎಸ್ಪಿ ಸುರೇಶ್, ಡಿಎಆರ್ ಡಿವೈಎಸ್ಪಿ ಪ್ರಕಾಶ್ ಮೊದಲಾದವರಿದ್ದರು.

*** ಪೊಲೀಸರು ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ಹಾಗೂ ಆರೋಗ್ಯದಲ್ಲಿ ಸ್ಥಿರತೆ ಕಾಯ್ದುಕೊಳ್ಳಬೇಕು ಎಂಬ ಕಾರಣಕ್ಕೆ ಬೊಜ್ಜು ಕರಗಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸುತ್ತೊಲೆ ಹೊರಡಿಸಿತ್ತು. ಇದರಿಂದ ಮಿತಿಮೀರಿದ ದೇಹದ ತೂಕ ಹೊಂದಿರುವ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳು, ಫಿಟ್ನೆಸ್ ಕಾಯ್ದುಕೊಳ್ಳಲು ಸಾಕಷ್ಟು ಕಸರತ್ತು ನಡೆಸಲಾರಂಭಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *