ಆರೋಪಿಗಳ ವಿರುದ್ದ ಕಠಿಣ ಕ್ರಮ : ಶಿವಮೊಗ್ಗ ಎಸ್ಪಿ

Strict action against the accused: Shimoga SP ಆರೋಪಿಗಳ ವಿರುದ್ದ ಕಠಿಣ ಕ್ರಮ : ಶಿವಮೊಗ್ಗ ಎಸ್ಪಿ

ಶಿವಮೊಗ್ಗ (shivamogga), ಮೇ 29: ಮನೆ ಮುಂಭಾಗ ನಿಲ್ಲಿಸಿದ ವಾಹನಗಳ ಗಾಜು ಜಖಂಗೊಳಿಸಿದ ಆರೋಪಿಗಳನ್ನು (accused) ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (sp g k mithun kumar) ಎಚ್ಚರಿಕೆ ನೀಡಿದ್ದಾರೆ.

ಗುರುವಾರ ಹೊಸಮನೆ ಬಡಾವಣೆಗೆ (hosamane extension) ಅವರು ಭೇಟಿ ನೀಡಿ ಜಖಂಗೊಂಡ ವಾಹನಗಳನ್ನು ವೀಕ್ಷಿಸಿದರು. ನಂತರ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದರು. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವಾಹನಗಳ ಗಾಜು ಜಖಂಗೊಳಿಸಿದ (Vehicle glass damage) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ದೂರುಗಳ ಆಧಾರದ ಮೇಲೆ, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ (doddapete police station) ಐಪಿಸಿಯ ವಿವಿಧ ಕಲಂ ಹಾಗೂ ಆಸ್ತಿ ನಷ್ಟ ತಡೆಗಟ್ಟುವಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ನಗರಾದ್ಯಂತ ಈಗಾಗಲೇ ರಾತ್ರಿ ಗಸ್ತು, ಫುಟ್ ಪ್ಯಾಟ್ರೋಲಿಂಗ್, ಏರಿಯಾ ಡಾಮಿನೇಷನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹೊಸಮನೆ ಬಡಾವಣೆಗೆ ವಿಶೇಷ ಒತ್ತು ನೀಡಲಾಗುವುದು. ಗಸ್ತು ಹೆಚ್ಚಿಸಲಾಗುವುದು. ಹಾಗೆಯೇ ಗಾಂಜಾ ಸೇವನೆ ಮಾಡಿದವರನ್ನು ಪತ್ತೆ ಹಚ್ಚಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಏನಾಗಿತ್ತು? : ಹೊಸಮನೆ ಬಡಾವಣೆಯಲ್ಲಿ ತಡರಾತ್ರಿ ದುಷ್ಕರ್ಮಿಗಳ (criminals) ಗುಂಪೊಂದು ಮನೆಗಳ ಮುಂಭಾಗ ನಿಲ್ಲಿಸಿದ್ದ ಕಾರುಗಳು, ಆಟೋಗಳು ಹಾಗೂ ಬೈಕ್ ಗಳ ಗಾಜುಗಳನ್ನು ಮಾರಕಾಸ್ತ್ರಗಳಿಂದ ಹೊಡೆದು ಜಖಂಗೊಳಿಸಿದ ಘಟನೆ ನಡೆದಿದೆ.

ಘಟನೆಯಲ್ಲಿ ಸುಮಾರು 8 ಕ್ಕೂ ಅಧಿಕ ವಾಹನಗಳು ಜಖಂಗೊಂಡಿವೆ ಎನ್ನಲಾಗಿದೆ. ಈ ದುಷ್ಕೃತ್ಯವು ಸ್ಥಳೀಯ ನಾಗರೀಕರಲ್ಲಿ ಆತಂಕ ಉಂಟು ಮಾಡಿದೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವಂತೆ ಸ್ಥಳೀಯರು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *