ಶಿವಮೊಗ್ಗದಲ್ಲಿ ದರೋಡೆಗೆ ಸಂಚು ಪ್ರಕರಣ : ಉತ್ತರ ಪ್ರದೇಶ ರಾಜ್ಯದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!

Robbery conspiracy case in Shimoga: Uttar Pradesh man sentenced to severe jail term! ಶಿವಮೊಗ್ಗದಲ್ಲಿ ದರೋಡೆಗೆ ಸಂಚು ಪ್ರಕರಣ : ಉತ್ತರ ಪ್ರದೇಶ ರಾಜ್ಯದ ವ್ಯಕ್ತಿಗೆ ಕಠಿಣ ಜೈಲು ಶಿಕ್ಷೆ!

ಶಿವಮೊಗ್ಗ (shivamogga), ಜೂ. 15: ದರೋಡೆಗೆ (robbery case) ಸಂಚು ನಡೆಸಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶ (uttar Pradesh) ರಾಜ್ಯದ ವ್ಯಕ್ತಿಯೋರ್ವನಿಗೆ, 5 ವರ್ಷ ಕಠಿಣ ಜೈಲು ಶಿಕ್ಷೆ (rigorous imprisonment) ವಿಧಿಸಿ ಶಿವಮೊಗ್ಗದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಉತ್ತರ ಪ್ರದೇಶ ರಾಜ್ಯದ ಮೀರತ್ (meerut) ನಿವಾಸಿ ಸಲ್ಮಾನ್ ಯಾನೆ ಲಲ್ಲಾ (24) ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೈಲು ಶಿಕ್ಷೆಯ ಜೊತೆಗೆ 8 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ (fine) ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 10 ದಿನಗಳ ಕಾಲ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶರಾದ ಪಲ್ಲವಿ ಬಿ. ಆರ್. ಅವರು 13-06-2024 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪಿ. ಓ. ಪುಷ್ಪಾ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ : 16-9-2020 ರಂದು ಶಿವಮೊಗ್ಗದ ವಿದ್ಯಾನಗರ ಮುಖ್ಯ ರಸ್ತೆಯಿಂದ ಮತ್ತೂರು (mattur) ಕಡೆ ಹೋಗುವ ರಸ್ತೆಯಲ್ಲಿ ಮಾರಕಾಸ್ತ್ರಗಳೊಂದಿಗೆ, ದರೋಡೆಗೆ ಹೊಂಚು ಹಾಕುತ್ತಿದ್ದ ತಂಡವನ್ನು ಕೋಟೆ ಠಾಣೆ (kote police station) ಇನ್ಸ್’ಪೆಕ್ಟರ್ ಚಂದ್ರಶೇಖರ್ ಮತ್ತವರ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದರು. ನಂತರ ಈ ಸಂಬಂಧ ನ್ಯಾಯಾಲಯಕ್ಕೆ (court) ಆರೋಪ ಪಟ್ಟಿ (charge sheet) ದಾಖಲಿಸಲಾಗಿತ್ತು.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →