ಶಿವಮೊಗ್ಗ : ತುಂಗಾ ಜಲಾಶಯ ಭರ್ತಿ!

Shimoga: Tunga Reservoir filling! ಶಿವಮೊಗ್ಗ : ತುಂಗಾ ಜಲಾಶಯ ಭರ್ತಿ! tungadam, monsoonrain,

ಶಿವಮೊಗ್ಗ (shivamogga), ಜೂ. 27: ಕಡಿಮೆ ಜಲ ಸಂಗ್ರಹಣೆ ಸಾಮರ್ಥ್ಯದ ತುಂಗಾ ಜಲಾಶಯವು (tunga dam), ನೈರುತ್ಯ ಮಾನ್ಸೂನ್ (monsoon) ಮೊದಲ ಮಳೆಗೆ ಗರಿಷ್ಠ ಮಟ್ಟ ತಲುಪಿದೆ. ಈ ಕಾರಣದಿಂದ ಗುರುವಾರ ಬೆಳಿಗ್ಗೆ ಡ್ಯಾಂನಿಂದ ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ (hospet tungabhadra dam) ನೀರು ಹೊರ ಬಿಡಲಾಗುತ್ತಿದೆ.

ಡ್ಯಾಂನ ಗರಿಷ್ಠ ಮಟ್ಟವಾದ 588.24 ಮೀಟರ್ ಗೆ ನೀರು ತಲುಪುತ್ತಿದ್ದಂತೆ, ಮುನ್ನೆಚ್ಚರಿಕೆ ಕ್ರಮವಾಗಿ ಡ್ಯಾಂನ 2 ಕ್ರಸ್ಟ್ ಗೇಟ್ ಗಳನ್ನು ತೆರೆದು ನೀರು ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂಗೆ 6 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಲ್ಲಿ 2 ಕ್ರಸ್ಟ್ ಗೇಟ್ ಗಳ ಮೂಲಕ 1 ಸಾವಿರ ಹಾಗೂ ಪವರ್ ಹೌಸ್ ಮೂಲಕ 5 ಸಾವಿರ ಕ್ಯೂಸೆಕ್ ನೀರು ಹೊರ ಹರಿಸಲಾಗುತ್ತಿದೆ. ಜಲಾಶಯದ ನೀರು ಸಂಗ್ರಹಣೆ ಸಾಮರ್ಥ್ಯ 3.24 ಟಿಎಂಸಿ ಆಗಿದೆ.

ಕಳೆದೆರೆಡು ಮೂರು ದಿನಗಳಿಂದ ಜಲಾನಯನ ಪ್ರದೇಶವಾದ ತೀರ್ಥಹಳ್ಳಿ (thirthahalli), ಆಗುಂಬೆ (agumbe) ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ (heavy rainfall). ಇದರಿಂದ ಡ್ಯಾಂನ ಒಳಹರಿವಿನಲ್ಲಿ (inflow) ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ. ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಒಳಹರಿವಿನಷ್ಟೆ ನೀರನ್ನು ಹೊರ ಹರಿಸಲಾಗುತ್ತಿದೆ.

ಒಳಹರಿವಿನಲ್ಲಿ ಏರಿಕೆ : ಮತ್ತೊಂದೆಡೆ, ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ (linganamakki dam) ಒಳಹರಿವಿನಲ್ಲಿಯೂ (inflow) ಗಣನೀಯ ಏರಿಕೆ ಕಂಡುಬಂದಿದೆ. ಗುರುವಾರದ ಬೆಳಿಗ್ಗೆಯ ಮಾಹಿತಿಯಂತೆ, 16,984 ಕ್ಯೂಸೆಕ್ ಒಳಹರಿವಿದೆ.

ಹೊರಹರಿವನ್ನು (out flow) ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಚುರುಕುಗೊಳ್ಳಲಾರಂಭಿಸಿದೆ. ಇದರಿಂದ ಒಳಹರಿವಿನಲ್ಲಿ ಏರಿಕೆ ಕಂಡುಬರಲಾರಂಭಿಸಿದೆ. ಪ್ರಸ್ತುತ ಡ್ಯಾಂನ ನೀರಿನ ಮಟ್ಟ 1747.60 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷದ ಇದೇ ದಿನದಂದು ಡ್ಯಾಂನಲ್ಲಿ 1740.20 ಅಡಿ ನೀರು ಸಂಗ್ರಹವಾಗಿತ್ತು

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *