ಸ್ಮಾರ್ಟ್ ಸಿಟಿ ಯೋಜನೆ  ಗಡುವು ಅಂತ್ಯ!

Smart City Project Deadline! ಸ್ಮಾರ್ಟ್ ಸಿಟಿ ಯೋಜನೆ ಗಡುವು ಅಂತ್ಯ! ವರದಿ : ಬಿ. ರೇಣುಕೇಶ್ b.renukesha

ಶಿವಮೊಗ್ಗ (shivamogga), ಜೂ. 29: ಭಾರೀ ನಿರೀಕ್ಷೆ ಹಾಗೂ ಪ್ರಚಾರದೊಂದಿಗೆ ಅನುಷ್ಠಾನಗೊಂಡಿದ್ದ ‘ಸ್ಮಾರ್ಟ್ ಸಿಟಿ’ (smart city) ಯೋಜನೆಯ ಗಡುವು ಜೂನ್ ತಿಂಗಳಿಗೆ ಪೂರ್ಣಗೊಳ್ಳಲಿದೆ. ಸ್ಮಾರ್ಟ್ ಸಿಟಿ ಕಚೇರಿಗಳು ಬಾಗಿಲು ಮುಚ್ಚಲಿವೆಯೇ? ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ – ಸಿಬ್ಬಂದಿಗಳ ಸ್ಥಿತಿಯೇನು? ಎಂಬುವುದು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ.

2015 ರಂದು ಕೇಂದ್ರ ಸರ್ಕಾರವು (central govt) ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿತ್ತು. ಕೇಂದ್ರ – ರಾಜ್ಯ ಸರ್ಕಾರಗಳ ಸಹಭಾಗಿತ್ವದ್ದಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ (prime minister narendra modi) ಅವರ ಮಹತ್ವಾಕಾಂಕ್ಷೆ ಯೋಜನೆ ಇದಾಗಿತ್ತು. ಕರ್ನಾಟಕ ರಾಜ್ಯದಲ್ಲಿ ಶಿವಮೊಗ್ಗ (shimoga) ನಗರ ಸೇರಿದಂತೆ 7 ನಗರಗಳು ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದವು.

ಭ್ರಮನಿರಸನ : ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಚಿತ್ರಣವೇ ಬದಲಾಗಲಿದೆ. ಮೂಲಸೌಕರ್ಯ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಯಾಗಲಿದೆ. ನೂರಾರು ಕೋಟಿ ರೂ. ಅನುದಾನ ಬರಲಿದೆ. ನಗರವು ಸ್ಮಾರ್ಟ್, ಹೈಟೆಕ್ (smart, hitech) ಆಗಲಿದೆ ಎಂದೆಲ್ಲ ಯೋಜನೆಯ ಪ್ರಾರಂಭದಲ್ಲಿ ಹೇಳಲಾಗಿತ್ತು. ಯಾವ ರೀತಿಯಲ್ಲಿ ನಗರ ಅಭಿವೃದ್ದಿಗೊಳಿಸಬೇಕು ಎಂಬ ಕುರಿತಂತೆ ಜನಾಭಿಪ್ರಾಯ ಕೂಡ ಸಂಗ್ರಹಿಸಲಾಗಿತ್ತು.

ಆದರೆ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಂಡ ನಂತರ, ನಾಗರೀಕರಲ್ಲಿದ್ದ ನಿರೀಕ್ಷೆಗಳೆಲ್ಲ ಹುಸಿಯಾಗುತ್ತಾ ಬರಲಾರಂಭಿಸಿದವು. ಸ್ಮಾರ್ಟ್ ಸಿಟಿ ಯೋಜನೆಯಡಿ ಇಡೀ ನಗರಕ್ಕೆ ಬದಲಾಗಿ, ಸೀಮಿತ ವ್ಯಾಪ್ತಿಯ ಪ್ರದೇಶಗಳನ್ನಷ್ಟೆ ಆಯ್ಕೆ ಮಾಡಿಕೊಂಡು ವಿವಿಧ ಅಭಿವೃದ್ದಿ ಕಾಮಗಾರಿ ಅನುಷ್ಠಾನಗೊಳಿಸಲಾಯಿತು.

ಸರಿಸುಮಾರು 930 ಕೋಟಿ ರೂ. ವೆಚ್ಚದಲ್ಲಿ ನಾನಾ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಆದರೆ ಕಾರ್ಯಗತಗೊಳಿಸಿದ ಹಲವು ಕಾಮಗಾರಿಗಳ ಬಗ್ಗೆನಾಗರೀಕ ವಲಯದಿಂದ ಭಾರೀ ಟೀಕೆಗಳು ವ್ಯಕ್ತವಾದವು. ಅವೈಜ್ಞಾನಿಕವಾಗಿ ಕಾಮಗಾರಿಗಳ ಅನುಷ್ಠಾನ, ವಿಳಂಬ, ಕಳಪೆ ಗುಣಮಟ್ಟ ಸೇರಿದಂತೆ ಹತ್ತು ಹಲವು ದೂರುಗಳು ಕೇಳಿಬಂದವು.

ಮುಂದೇನು? : ಸ್ಮಾರ್ಟ್ ಸಿಟಿ ಯೋಜನೆಯ ಅವಧಿ ಜೂನ್ ಗೆ ಪೂರ್ಣಗೊಳ್ಳಲಿದೆ. ಇದನ್ನು ಮತ್ತೆ ವಿಸ್ತರಿಸುವ ಕುರಿತಂತೆ ಸರ್ಕಾರದಿಂದ ಯಾವುದೇ ಸೂಚನೆ, ನಿರ್ದೇಶನಗಳು ಲಭ್ಯವಾಗಿಲ್ಲ. ಸದ್ಯ ಸ್ಮಾರ್ಟ್ ಸಿಟಿಯಡಿ ಅನುಷ್ಠಾನ ಮಾಡಿದ ಯೋಜನೆಗಳನ್ನು ಮಹಾನಗರ ಪಾಲಿಕೆ ಆಡಳಿತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ, ಪಾಲಿಕೆ ಆಡಳಿತವೇ ಸ್ಮಾರ್ಟ್ ಸಿಟಿಯಡಿ ಅನುಷ್ಠಾನಗೊಳಿಸಿದ ಕಾಮಗಾರಿಗಳ ಮೇಲುಸ್ತುವಾರಿ – ನಿರ್ವಹಣೆ ಮಾಡಲಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *