ಭದ್ರಾ ಡ್ಯಾಂ ಒಳಹರಿವಿನಲ್ಲಿ ಏರಿಕೆ! ಮಲೆನಾಡಲ್ಲಿ ಮುಂದುವರಿದ ಮುಂಗಾರು ಮಳೆ

Increase in Bhadra Dam inflow! Continued Monsoon rains in the hills ಭದ್ರಾ ಡ್ಯಾಂ ಒಳಹರಿವಿನಲ್ಲಿ ಏರಿಕೆ! ಮಲೆನಾಡಲ್ಲಿ ಮುಂದುವರಿದ #ತುಂಗಾಡ್ಯಾಂ,ಮುಂಗಾರು ಮಳೆ

ಶಿವಮೊಗ್ಗ (shivamogga) , ಜು. 5: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ (monsoon rain) ಮುಂದುವರಿದಿದೆ. ಮಧ್ಯ ಕರ್ನಾಟಕ ಭಾಗದ ರೈತರ ಜೀವನಾಡಿ ಎಂದೇ ಕರೆಯಲಾಗುವ, ಭದ್ರಾ ಜಲಾಶಯದ (bhadra dam) ಒಳಹರಿವಿನಲ್ಲಿ (inflow) ಏರಿಕೆ ಕಂಡುಬಂದಿದೆ. ಮತ್ತೊಂದೆಡೆ, ಲಿಂಗನಮಕ್ಕಿ ಹಾಗೂ ತುಂಗಾ ಡ್ಯಾಂ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ.

ಜು. 5 ರ ಬೆಳಿಗ್ಗೆಯ ಮಾಹಿತಿಯಂತೆ ಭದ್ರಾ (bhadra) ಜಲಾಶಯಕ್ಕೆ 16,171 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 350 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ಪ್ರಸ್ತುತ ಡ್ಯಾಂ ನೀರಿನ ಮಟ್ಟ 129 ಅಡಿ 6 ಇಂಚು (ಗರಿಷ್ಠ ಮಟ್ಟ : 186) ಇದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 132 ಅಡಿಯಿತ್ತು.

ತುಂಗಾ ಡ್ಯಾಂ (tunga dam) ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಡ್ಯಾಂಗೆ 34,477 ಕ್ಯೂಸೆಕ್ ಒಳಹರಿವಿದೆ. ಆದರೆ ಒಳಹರಿವಿನಲ್ಲಿ ನಿರಂತರ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ, 37,104 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಒಟ್ಟಾರೆ ಡ್ಯಾಂನ (dam) ನೀರಿನ ಸಂಗ್ರಹಣೆ ಸಾಮರ್ಥ್ಯವು 3.24 ಟಿಎಂಸಿ ಆಗಿದೆ.

ಲಿಂಗನಮಕ್ಕಿ ಡ್ಯಾಂಗೆ (linganamakki dam) 44,024 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 1340 ಕ್ಯೂಸೆಕ್ (cusec) ನೀರನ್ನು ಹೊರ ಬಿಡಲಾಗುತ್ತಿದೆ. ಡ್ಯಾಂ ನೀರಿನ ಮಟ್ಟ 1763 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1742. 65 ಅಡಿ ನೀರು ಸಂಗ್ರಹವಾಗಿತ್ತು.

ಮಳೆ ವಿವರ: ಜು. 5 ರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ (district) ವಿವಿಧೆಡೆ ಬಿದ್ದ ಮಳೆಯ ವಿವರ ಈ ಮುಂದಿನಂತಿದೆ. ಶಿವಮೊಗ್ಗ (shimoga) 4. 80 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ (bhadravathi) 4. 60 ಮಿ.ಮೀ., ತೀರ್ಥಹಳ್ಳಿ (thirthalli) 10. 10 ಮಿ.ಮೀ., ಸಾಗರ (sagara) 20. 60 ಮಿ.ಮೀ., ಶಿಕಾರಿಪುರ (shikaripura) 1. 20 ಮಿ.ಮೀ., ಸೊರಬ (soraba) 4. 30 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 12. 60 ಮಿ.ಮೀ. ವರ್ಷಧಾರೆಯಾಗಿದೆ (rainfall).

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →