ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ನಿವಾಸಿಗಳಿಂದ ಮನವಿ

Petition from the residents demanding inclusion in Shimoga Metropolitan Corporation ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಆಗ್ರಹಿಸಿ ನಿವಾಸಿಗಳಿಂದ ಮನವಿ

ಶಿವಮೊಗ್ಗ (shivamogga), ಜು. 6: ಗ್ರಾಮ ಪಂಚಾಯ್ತಿ (grama panchayat) ಅಧೀನದಲ್ಲಿರುವ ತಮ್ಮ ಬಡಾವಣೆಯನ್ನು ನಿಯಮಾನುಸಾರ ಮಹಾನಗರ ಪಾಲಿಕೆ (city corporation) ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಂಡು ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ, ನಗರದ ಹೊರವಲಯ ಸಾಗರ ರಸ್ತೆಯಲ್ಲಿರುವ (sagara road) ಶಕ್ತಿಧಾಮ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘವು (shaktidhama residents’ welfare association) ಮಹಾನಗರ ಪಾಲಿಕೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಿದೆ.

ಶಕ್ತಿಧಾಮ ಲೇಔಟ್ (shaktidhama layout) ಮುದ್ದಿನಕೊಪ್ಪ ಗ್ರಾಮ ಪಂಚಾಯ್ತಿ (muddinakoppa gram panchayat) ಆಡಳಿತದ ಅಧೀನದಲ್ಲಿದೆ. ಸದರಿ ಬಡಾವಣೆಯಲ್ಲಿ ಈಗಾಗಲೇ 200 ಕ್ಕೂ ಅಧಿಕ ಮನೆಗಳ ನಿರ್ಮಾಣ ಮಾಡಲಾಗಿದೆ. ದಿನದಿಂದ ದಿನಕ್ಕೆ ಬಡಾವಣೆ ಅಭಿವೃದ್ದಿಯಾಗುತ್ತಿದೆ. ಹೊಸ ಹೊಸ ಮನೆಗಳ (houses) ನಿರ್ಮಾಣವಾಗುತ್ತಿದೆ.

ಈ ಕಾರಣದಿಂದ ಬಡಾವಣೆಗೆ ಸಮರ್ಪಕ ಮೂಲಸೌಕರ್ಯ (infrastructure) ಲಭ್ಯತೆ ಹಾಗೂ ನಿವಾಸಿಗಳ ಅನುಕೂಲಕ್ಕಾಗಿ, ಗ್ರಾಮ ಪಂಚಾಯ್ತಿ ಅಧೀನದಲ್ಲಿರುವ ಬಡಾವಣೆಯನ್ನು ನಿಯಮಾನುಸಾರ (as per the rules) ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಈ ಮೂಲಕ ನಿವಾಸಿಗಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ನಿವಾಸಿಗಳು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಹೆಚ್ಚುತ್ತಿರುವ ಬೇಡಿಕೆ : ಸರಿಸುಮಾರು 27 ವರ್ಷಗಳಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ (shimoga corporation) ಪರಿಷ್ಕರಣೆಯಾಗಿಲ್ಲ. ಸದ್ಯ ನಗರದ ಹೊರವಲಯದ ಪ್ರದೇಶಗಳಲ್ಲಿ ಬೃಹತ್ ಬಡಾವಣೆಗಳು ಅಭಿವೃದ್ದಿಯಾಗಿವೆ. ಆದರೆ ಗ್ರಾಮ ಪಂಚಾಯ್ತಿ ಆಡಳಿತಗಳಿಂದ ಮೂಲಸೌಕರ್ಯ ಕಲ್ಪಿಸಲು ಆಗುತ್ತಿಲ್ಲ.

ಇದರಿಂದ ನಾಗರೀಕರು (citizens) ತೀವ್ರ ತೊಂದರೆ ಎದುರಿಸುವಂತಾಗಿದೆ. ಈ ಕಾರಣದಿಂದ ವೈಜ್ಞಾನಿಕ ರೀತಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕೆಂಬ ಬೇಡಿಕೆಗಳು ಹೊರವಲಯದ ಪ್ರದೇಶದ ಬಡಾವಣೆಗಳ ನಾಗರೀಕರಿಂದ ಕೇಳಿಬರಲಾರಂಭಿಸಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *