shimoga: A car collided with an electric pole on the side of the road! ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!

ಶಿವಮೊಗ್ಗ : ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ!

ಶಿವಮೊಗ್ಗ, ಜು. 7: ರಸ್ತೆ ಬದಿ ವಿದ್ಯುತ್ ಕಂಬಕ್ಕೆ (electric pole) ಕಾರೊಂದು ಡಿಕ್ಕಿ ಹೊಡೆದ ಘಟನೆ ಶಿವಮೊಗ್ಗ ನಗರದ ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ, ಆಲ್ಕೋಳದ (alkola) ಭಾರತೀಯ ಆಹಾರ ನಿಗಮ (fci) ಕಚೇರಿ ಎದುರಿನ 100 ಅಡಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು (car) ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಅನಾಹುತದಿಂದ ಪಾರಾಗಿದ್ದಾರೆ. ಅವಘಡದ ನಂತರ ವಿದ್ಯುತ್ ಸಂಪರ್ಕ (electrical connection) ಕಡಿತಗೊಂಡಿದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.

ವಿದ್ಯುತ್ ಕಂಬ  ರಸ್ತೆಗೆ ವಾಲಿಕೊಂಡಿರುವುದರಿಂದ, ಸದರಿ ರಸ್ತೆಯಲ್ಲಿ ವಾಹನ ಸಂಚಾರ (vehicular traffic) ನಿರ್ಬಂಧಿಸಲಾಗಿದೆ. ಮತ್ತೊಂದು ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ (mescom) ಅಧಿಕಾರಿಗಳು, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲಿಸಿದ್ದಾರೆ.

ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ! ಶಿವಮೊಗ್ಗ, ಜು. 6: ಮಲೆನಾಡಿನಲ್ಲಿ ಮುಂಗಾರು ಮಳೆ ಮುಂದುವರಿದಿದ್ದರೂ ಅಬ್ಬರ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ನೀರಿನ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ. ಶನಿವಾರ ಬೆಳಿಗ್ಗೆಯ ಮಾಹಿತಿಯಂತೆ ಲಿಂಗನಮಕ್ಕಿ ಡ್ಯಾಂನ ಒಳಹರಿವು 20,420 ಕ್ಯೂಸೆಕ್ ಗೆ ಇಳಿಕೆಯಾಗಿದೆ. 2030 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 1764.8 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 1744.4 ಅಡಿ ನೀರು ಸಂಗ್ರಹವಾಗಿತ್ತು. ಭದ್ರಾ ಡ್ಯಾಂನ ಒಳಹರಿವು 7736 ಕ್ಯೂಸೆಕ್ ಗೆ ಇಳಿಕೆಯಾಗಿದೆ. 352 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಪ್ರಸ್ತುತ ಡ್ಯಾಂ ನೀರಿನ ಮಟ್ಟ 130.7 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 138 ಅಡಿಯಿತ್ತು. ಉಳಿದಂತೆ ತುಂಗಾ ಜಲಾಶಯವು ಈಗಾಗಲೇ ಗರಿಷ್ಠ ಮಟ್ಟವಾದ 588.24 ಮೀಟರ್ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 17,289 ಕ್ಯೂಸೆಕ್ ಇದೆ. 14,662 ಕ್ಯೂಸೆಕ್ ನೀರನ್ನು ಹೊಸಪೇಟೆಯ ತುಂಗಾಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ. ಮಳೆ ವಿವರ : ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಬಿದ್ದ ಮಳೆ ವಿವರ ಈ ಮುಂದಿನಂತಿದೆ. ಶಿವಮೊಗ್ಗದಲ್ಲಿ 10.20 ಮಿಲಿ ಮೀಟರ್ (ಮಿ.ಮೀ.), ಭದ್ರಾವತಿ 5.70 ಮಿ.ಮೀ., ತೀರ್ಥಹಳ್ಳಿ 45.80 ಮಿ.ಮೀ., ಸಾಗರ 29.10 ಮಿ.ಮೀ., ಶಿಕಾರಿಪುರ 5.20 ಮಿ.ಮೀ., ಸೊರಬ 8 ಮಿ.ಮೀ ಹಾಗೂ ಹೊಸನಗರದಲ್ಲಿ 42.50 ಮಿ.ಮೀ,. ಮಳೆಯಾಗಿದೆ. ಶನಿವಾರ ಕೂಡ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಮುಂದುವರಿದಿದೆ. ತಾಪಮಾನದ ಪ್ರಮಾಣದಲ್ಲಿ ಗಣನೀಯ ಇಳಿಕೆಯಾಗಿದೆ. ತಣ್ಣನೆಯ ವಾತಾವರಣ ನೆಲೆಸಿದೆ. ಮುಂದಿನ ಕೆಲ ದಿನಗಳವರೆಗೆ ಜಿಲ್ಲೆಯಾದ್ಯಂತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. Previous post ಲಿಂಗನಮಕ್ಕಿ, ತುಂಗಾ, ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ!
Sickness among the citizens due to sewage pollution : The administration of Shimoga Corporation turned a blind eye! ಚರಂಡಿ ಅಸ್ವಚ್ಚತೆಯಿಂದ ನಾಗರೀಕರಲ್ಲಿ ಅನಾರೋಗ್ಯ : ಕಣ್ಮುಚ್ಚಿ ಕುಳಿತ ಶಿವಮೊಗ್ಗ ಪಾಲಿಕೆ ಆಡಳಿತ! Next post ಚರಂಡಿ ಅಸ್ವಚ್ಚತೆಯಿಂದ ನಾಗರೀಕರಲ್ಲಿ ಅನಾರೋಗ್ಯ : ಕಣ್ಮುಚ್ಚಿ ಕುಳಿತ ಶಿವಮೊಗ್ಗ ಪಾಲಿಕೆ ಆಡಳಿತ!