ಶಿವಮೊಗ್ಗ : ಮಳೆಯಲ್ಲಿಯೇ ಸ್ವಚ್ಚತಾ ವಾಹಿನಿ ಮಹಿಳಾ ಸಿಬ್ಬಂದಿಗಳಿಂದ ಬೃಹತ್ ಪ್ರತಿಭಟನೆ!

Shimoga: Massive protest by women staff of Swachhata Vahini in the rain! ಶಿವಮೊಗ್ಗ : ಮಳೆಯಲ್ಲಿಯೇ ಸ್ವಚ್ಚತಾ ವಾಹಿನಿ ಮಹಿಳಾ ಸಿಬ್ಬಂದಿಗಳಿಂದ ಬೃಹತ್ ಪ್ರತಿಭಟನೆ!

ಶಿವಮೊಗ್ಗ (shivamogga), ಜು. 8: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಗ್ರಾಮ ಪಂಚಾಯ್ತಿ ಸ್ವಚ್ಚ ವಾಹಿನಿ (grama panchayat swachh vahini employees) ಆಟೋ ಡ್ರೈವರ್ಸ್ ಮತ್ತು ಸಹಾಯಕಿಯರ ಸಂಘವು ಸೋಮವಾರ ಶಿವಮೊಗ್ಗ (shimoga) ನಗರದಲ್ಲಿ ಸುರಿಯುತ್ತಿದ್ದ ಮಳೆಯ (rain) ನಡುವೆಯೇ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ (protest rally) ನಡೆಸಿದ ನೂರಾರು ಮಹಿಳಾ ಸಿಬ್ಬಂದಿಗಳು, ಜಿಲ್ಲಾ ಪಂಚಾಯ್ತಿ ಕಚೇರಿ (zilla panchayat office) ಎದುರು ಧರಣಿ (protest) ನಡೆಸಿದರು. ಜಿಪಂ ಆಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ (state govt) ಮನವಿ ಪತ್ರ ಅರ್ಪಿಸಿದರು.

ಸ್ವಚ್ಚ ವಾಹಿನಿ ಸಿಬ್ಬಂದಿಗಳು ಗ್ರಾಮೀಣ ಭಾಗದ ಸ್ವಚ್ಚತಾ ಕಾರ್ಯದಲ್ಲಿ (cleaning work) ಮಹತ್ತರ ಪಾತ್ರವಹಿಸಿಕೊಂಡು ಬರುತ್ತಿದ್ದಾರೆ. ಆದರೆ ಗ್ರಾಮ ಪಂಚಾಯ್ತಿ ಆಡಳಿತಗಳಿಂದ (grama panchayat) ಸೂಕ್ತ ಸೌಲಭ್ಯಗಳು ದೊರಕುತ್ತಿಲ್ಲ. ಸಿಬ್ಬಂದಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು (protesters) ಆರೋಪಿಸಿದ್ದಾರೆ.

ಈಗಾಗಲೇ ಹಲವು ಬಾರಿ ನ್ಯಾಯಬದ್ದ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿಕೊಂಡು ಬರಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಸಮಸ್ಯೆ ಪರಿಹಾರಕ್ಕೆ ಆಡಳಿತಗಳು ಕ್ರಮಕೈಗೊಂಡಿಲ್ಲ. ಸಂಪೂರ್ಣ ನಿರ್ಲಕ್ಷ್ಯ ಧೋರಣೆ (neglect attitude) ಅನುಸರಿಸಿಕೊಂಡು ಬರುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಬೇಡಿಕೆಗಳೇನು (demands)? :ತರಬೇತಿ ಪಡೆದ ಸ್ವಚ್ಚತಾ ವಾಹಿನಿ (swachh vahini) ನೌಕರರಿಗೆ ಗ್ರಾಪಂಗಳಲ್ಲಿ ಕೆಲಸ ಕೊಡಲು ಕ್ರಮಕೈಗೊಳ್ಳಬೇಕು. ಸ್ವಚ್ಚತಾ ವಾಹಿನಿ ವಾಹನಗಳಿಗೆ ವಿಮೆ ನವೀಕರಣ ಮಾಡಿಕೊಡಬೇಕು. ಹಾಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ (employees) ಬಾಕಿ ವೇತನ ಬಿಡುಗಡೆ ಮಾಡಬೇಕು. 15 ನೇ ಹಣಕಾಸಿನಲ್ಲಿ 6 ತಿಂಗಳ ವೇತನ ಕಡ್ಡಾಯವಾಗಿ ನೀಡಬೇಕು. ಹಾಗೆಯೇ ಉಳಿದ 6 ತಿಂಗಳ ವೇತನಕ್ಕೆ (salary) ಶಾಸನಬದ್ದ ಅನುದಾನದಿಂದ ವಿತರಿಸುವ ಆದೇಶ ಜಾರಿಗೊಳಿಸಬೇಕು.

ನೌಕರರನ್ನು ಗ್ರಾಮ ಪಂಚಾಯ್ತಿ ಸಿಬ್ಬಂದಿಗಳೆಂದು ಪರಿಗಣಿಸಿ, ನಿಯಮಾನುಸಾರ ಸೌಲಭ್ಯ ವಿತರಿಸಬೇಕು. ಆರೋಗ್ಯ ವಿಮೆ ಜಾರಿಗೊಳಿಸಬೇಕು. ಕನಿಷ್ಠ ವೇತನವನ್ನು (minimum wage) 26 ಸಾವಿರ ರೂ. ನಿಗದಿಗೊಳಿಸಬೇಕು. ಚಾಲನೆ ತರಬೇತಿ (driving training) ಪಡೆದ ಸಿಬ್ಬಂದಿಗಳಿಗೆ ಆಟೋ ವಿತರಿಸಬೇಕು. ದುರಸ್ತಿಗೀಡಾದ ವಾಹನಗಳ ದುರಸ್ತಿಗೆ ಕ್ರಮಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘಟನೆ ಆಗ್ರಹಿಸಿದೆ.

ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಮುಖಂಡರಾದ ಡಿ.ಎಂ.ಮಲಿಯಪ್ಪ, ಹನುಮಮ್ಮ, ಕುಸುಮಬಾಯಿ, ಮಹಾಲಕ್ಷ್ಮೀ ಸೇರಿದಂತೆ ಮೊದಲಾದವರಿದ್ದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *