ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

The plane did not land in Shimoga : Home Minister returned to Bangalore! ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ : ಬೆಂಗಳೂರಿಗೆ ವಾಪಾಸ್ ಆದ ಗೃಹ ಸಚಿವರು!

ಶಿವಮೊಗ್ಗ (shivamogga), ಜು. 13: ಮಳೆ – ಮೋಡ ಕವಿದ ವಾತಾವರಣದ ಕಾರಣದಿಂದ ಬೆಂಗಳೂರಿನಿಂದ (bengaluru) ಆಗಮಿಸಿದ ಇಂಡಿಗೋ ವಿಮಾನ (indigo plane), ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಾಧ್ಯವಾಗದೆ ಬೆಂಗಳೂರಿಗೆ ವಾಪಾಸ್ ಹಿಂದಿರುಗಿದ ಘಟನೆ ಶನಿವಾರ ನಡೆದಿದೆ.

ಸದರಿ ವಿಮಾನದಲ್ಲಿಯೇ (aeroplane) ಗೃಹ ಸಚಿವ ಪರಮೇಶ್ವರ್ (home minister Parameshwar) ಅವರು ಜಿಲ್ಲೆಯ ತೀರ್ಥಹಳ್ಳಿ (thirthalli) ಹಾಗೂ ಸೊರಬದಲ್ಲಿ (soraba) ಆಯೋಜಿತವಾಗಿದ್ದ ವಿವಿಧ ಪೂರ್ವ ನಿರ್ಧರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶಿವಮೊಗ್ಗಕ್ಕೆ (shimoga) ಆಗಮಿಸುತ್ತಿದ್ದರು. ವಿಮಾನ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ವಾಪಾಸ್ ಆಗಿದ್ದರಿಂದ, ಗೃಹ ಸಚಿವರ ಜಿಲ್ಲಾ ಪ್ರವಾಸ ರದ್ದಾಗುವಂತಾಯಿತು.

ಸಮಸ್ಯೆ : ಮಳೆ – ಮೋಡ ಕವಿದ ವಾತಾವರಣದ (rain – cloudy weather) ಕಾರಣದಿಂದ ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇಯು (runway) ಸ್ಪಷ್ಟವಾಗಿ ವಿಮಾನದ ಪೈಲಟ್ ಗೆ (pilot) ಗೋಚರವಾಗುತ್ತಿರಲಿಲ್ಲ. ಆಕಾಶದಲ್ಲಿ ಹಲವು ಬಾರಿ ವಿಮಾನ ಸುತ್ತಾಟ ನಡೆಸಿ, ಲ್ಯಾಂಡಿಂಗ್ ಗೆ ಯತ್ನಿಸಿದರೂ ಲ್ಯಾಂಡಿಂಗ್ ಸಾಧ್ಯವಾಗಿಲ್ಲ ಎನ್ನಲಾಗಿದೆ.

ಮತ್ತೊಂದೆಡೆ, ಮಧ್ಯಾಹ್ನ ತಿರುಪತಿಯಿಂದ (tirupati) ಶಿವಮೊಗ್ಗಕ್ಕೆ ಆಗಮಿಸಿದ್ದ ಸ್ಟಾರ್ ಏರ್ ಲೈನ್ಸ್ ವಿಮಾನ (star airlines plane) ಲ್ಯಾಂಡ್ ಆಗಿದೆ ಎಂದು ತಿಳಿದುಬಂದಿದೆ. ಮಳೆ, ಮೋಡ ಕವಿದ ಸಂದರ್ಭದಲ್ಲಿ ಹಾಗೂ ರಾತ್ರಿ ವೇಳೆ ವಿಮಾನಗಳ ಲ್ಯಾಂಡಿಂಗ್ (night landing) ಮಾಡಲು ಅಗತ್ಯವಾದ ಸೌಲಭ್ಯಗಳು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (shimoga airport) ಇಲ್ಲವಾಗಿದೆ. ಇದರಿಂದ ಕೆಲ ವೇಳೆ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗುತ್ತಿದೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *