‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ!

ಶಿವಮೊಗ್ಗ, ಫೆ. 27: ‘ಶಿವಮೊಗ್ಗ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತಾ ಕಾರ್ಯವು ಸಮರ್ಪಕವಾಗಿ ನಡೆಯುತ್ತಿಲ್ಲವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಚೆನ್ನಾಮುಂಭಾಪುರ ದೂರಿದ್ದಾರೆ.
ಈಗಾಗಲೇ ಈ ಕುರಿತಂತೆ ಅಬ್ಬಲಗೆರೆ ಗ್ರಾಪಂ ಪಿಡಿಓ ಹಾಗೂ ಆಡಳಿತದ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಗ್ರಾಪಂ ಆಡಳಿತ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಪಂ ಸದಸ್ಯರು ಆರೋಪಿಸಿದ್ದಾರೆ.
ಈ ಕುರಿತಂತೆ ತಾಲೂಕು ಪಂಚಾಯ್ತಿ ಇಓ ಅವರ ಗಮನಕ್ಕೆ ತರಲಾಗಿದೆ. ಸಮಸ್ಯೆ ಪರಿಹಾರವಾಗದಿದ್ದರೆ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ್ ಚೆನ್ನಾಮುಂಭಾಪುರ ಅವರು ಎಚ್ಚರಿಕೆ ನೀಡಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *