ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ!

Heavy rain across Shimoga district! ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ! monsoonrain malnad rain alert red alert shimogarain karnataka rain western ghats ರೆಡ್ ಅಲರ್ಟ್ ಮುಂಗಾರು ಮಳೆ munagru male

ಶಿವಮೊಗ್ಗ (shivamogga), ಜು. 14: ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ (shimoga district) ದುರ್ಬಲಗೊಂಡಿದ್ದ ಮುಂಗಾರು ಮಳೆ (monsoon rain), ಮತ್ತೆ ಚುರುಕುಗೊಂಡಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಸೋಮವಾರ ಕೂಡ ಜಿಲ್ಲೆಯಾದ್ಯಂತ ಭಾರೀ ವರ್ಷಧಾರೆಯಾಗುತ್ತಿದೆ (heavy rainfall). ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಎಡೆಬಿಡದೆ ವರ್ಷಧಾರೆಯಾಗುತ್ತಿದೆ.

ಈಗಾಗಲೇ ಹವಾಮಾನ ಇಲಾಖೆಯು (meteorological department) ಜು. 15 ಮತ್ತು ಜು. 16 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ರೆಡ್ ಅಲರ್ಟ್ (red alert forecast) ಘೋಷಣೆ ಮಾಡಿತ್ತು. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಹಲವೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ.

ಘಟ್ಟ ಪ್ರದೇಶಗಳಲ್ಲಿ (western ghats) ವರುಣನ ಅಬ್ಬರ ಜೋರಾಗಿದೆ. ಕೆರೆಕಟ್ಟೆ, ನದಿಗಳ (rivers) ನೀರಿನ ಸಂಗ್ರಹದಲ್ಲಿ ಭಾರೀ ಪ್ರಮಾಣದ ಹೆಚ್ಚಳ ಕಂಡುಬರಲಾರಂಭಿಸಿದೆ. ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಘಟ್ಟ ಪ್ರದೇಶಗಳಾದ ಮಾಣಿಯಲ್ಲಿ (mani) 102 ಮಿಲಿ ಮೀಟರ್, ಯಡೂರು (yadur) 94 ಮಿ.ಮೀ., ಹುಲಿಕಲ್ಲು (hulikal) 132 ಮಿ.ಮೀ., ಮಾಸ್ತಿಕಟ್ಟೆ (masthikatte) 135 ಮಿ.ಮೀ., ಚಕ್ರಾ (chakra) 140 ಮಿ.ಮೀ ಹಾಗೂ ಸಾವೇಹಕ್ಲುವಿನಲ್ಲಿ (savehaklu) 125 ಮಿ.ಮೀ. ವರ್ಷಧಾರೆಯಾಗಿದೆ.

ಉಳಿದಂತೆ ಶಿವಮೊಗ್ಗದಲ್ಲಿ (shivamogga) 20 ಮಿ.ಮೀ., ಭದ್ರಾವತಿ (bhadravathi)12. 90 ಮಿ.ಮೀ., ತೀರ್ಥಹಳ್ಳಿ (thirthalli) 56. 20 ಮಿ.ಮೀ., ಸಾಗರ (sagar) 71. 90 ಮಿ.ಮೀ., ಶಿಕಾರಿಪುರ (shikaripura) 24. 90 ಮಿ.ಮೀ., ಸೊರಬ (sorab) 33 ಮಿ.ಮೀ. ಹಾಗೂ ಹೊಸನಗರದಲ್ಲಿ (hosanagara) 57. 20 ಮಿ.ಮೀ. ವರ್ಷಧಾರೆಯಾಗಿದೆ.

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →