ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂ ಒಳಹರಿವಿನಲ್ಲಿ ಭಾರೀ ಹೆಚ್ಚಳ!

shimoga – davanagere district farmers' lifeline bhadra dam water inflow huge increase! shimoga – davanagere district farmers' lifeline bhadra dam water inflow huge increase! ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಭದ್ರಾ ಡ್ಯಾಂ ಒಳಹರಿವಿನಲ್ಲಿ ಭಾರೀ ಹೆಚ್ಚಳ!

ಶಿವಮೊಗ್ಗ, ಜು. 17: ಮಧ್ಯ ಕರ್ನಾಟಕದ (central karnataka) ಪ್ರಮುಖ ಜಲಾಶಯವಾದ ಭದ್ರಾ (bhadra dam) ನೀರಿನ ಸಂಗ್ರಹದಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರಲಾರಂಭಿಸಿದೆ. ಜಲಾನಯನ ಪ್ರದೇಶ (catchment area) ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ (heavy rainfall) ಡ್ಯಾಂ ಒಳಹರಿವಿನಲ್ಲಿ ನಿರಂತರ ಹೆಚ್ಚಳವಾಗುತ್ತಿದೆ. ಒಂದೇ ದಿನದಲ್ಲಿ ಮೂರುವರೆ ಅಡಿಗೂ ಹೆಚ್ಚು ನೀರು ಸಂಗ್ರಹವಾಗಿದೆ.

ಬುಧವಾರ ಬೆಳಿಗ್ಗೆಯ ಮಾಹಿತಿಯಂತೆ ಡ್ಯಾಂನ ಒಳಹರಿವು (inflow) 34,544 ಕ್ಯೂಸೆಕ್ ಗೆ ಏರಿಕೆಯಾಗಿದೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಕಂಡುಬಂದ ಅತ್ಯಧಿಕ (highest) ಒಳಹರಿವು ಇದಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಡ್ಯಾಂನಲ್ಲಿ 3 ಅಡಿ 9 ಇಂಚು ನೀರು ಸಂಗ್ರಹವಾಗಿದೆ.

ಪ್ರಸ್ತುತ ಡ್ಯಾಂ ನೀರಿನ ಮಟ್ಟ (dam water level) 148 ಅಡಿ 6 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. 169 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ (out flow). ಕಳೆದ ವರ್ಷ ಇದೇ ದಿನದಂದು ಡ್ಯಾಂನಲ್ಲಿ 141. 4 ಅಡಿ ನೀರು ಸಂಗ್ರಹವಾಗಿತ್ತು.

ಡ್ಯಾಂ ಜಲಾನಯನ ಪ್ರದೇಶವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ (chikkamagaluru) ಭಾರೀ ಪ್ರಮಾಣದ ವರ್ಷಧಾರೆಯಾಗುತ್ತಿದೆ (heavy to heavy rainfall). ಇದರಿಂದ ಭದ್ರಾ ಡ್ಯಾಂ ಒಳಹರಿವಿನಲ್ಲಿ (bhadra dam inflow) ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ.

ಮುಂದಿನ ಕೆಲ ದಿನಗಳವರೆಗೆ ಇದೇ ರೀತಿ ಒಳಹರಿವು ಕಂಡುಬಂದರೆ, ಪ್ರಸ್ತುತ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಡ್ಯಾಂ ಭರ್ತಿಯಾಗಲಿದೆ (maximum level) ಎಂದು ಡ್ಯಾಂ ವ್ಯಾಪ್ತಿಯ ಎಂಜಿನಿಯರ್ ಗಳು ಅಭಿಪ್ರಾಯಪಡುತ್ತಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →